<p><strong>ಬೆಂಗಳೂರು: </strong>ನಗರದಲ್ಲಿ ಮಂಗಳವಾರ ರಾತ್ರಿ ಜೋರಾದ ಮಳೆ ಸುರಿದಿದ್ದು, ಹಲವೆಡೆ ರಸ್ತೆ ಮೇಲೆಯೇ ನೀರು ಹರಿಯಿತು.</p>.<p>ಬೆಳಿಗ್ಗೆಯಿಂದ ನಗರದಲ್ಲಿ ಬಿಸಿಲು ಇತ್ತು. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಂಡುಬಂತು. ಸಂಜೆ ವೇಳೆಯಲ್ಲಿ ಜಿಟಿ ಜಿಟಿಯಾಗಿ ಮಳೆ ಸುರಿಯಿತು. ರಾತ್ರಿ 9ರ ನಂತರ ಹಲವೆಡೆ ಜೋರಾದ ಮಳೆಯಾಯಿತು.</p>.<p>ಮೈಸೂರು ರಸ್ತೆಯ ನಾಯಂಡಹಳ್ಳಿ, ದೀಪಾಂಜಲಿನಗರ, ಗಿರಿನಗರ, ಹನುಮಂತನಗರ, ಬಸವನಗುಡಿ, ಜಯನಗರ, ರಾಜಾಜಿನಗರ, ವಿಜಯನಗರ, ಯಶವಂತಪುರ, ಪೀಣ್ಯ, ವಿದ್ಯಾರಣ್ಯಪುರ, ಹೆಬ್ಬಾಳ ಹಾಗೂ ಸುತ್ತಮುತ್ತ ಮಳೆ ಆಯಿತು. ಗಾಳಿಯೂ ಜೋರಾಗಿತ್ತು.</p>.<p>ನಾಯಂಡಹಳ್ಳಿ ಸಿಗ್ನಲ್ ಬಳಿ ರಸ್ತೆಯಲ್ಲೇ ಎರಡು ಅಡಿಯಷ್ಟು ನೀರು ಹರಿಯಿತು. ಅದರಿಂದಾಗಿ ಸಿಗ್ನಲ್ ಹಾಗೂ ಸುತ್ತಮುತ್ತ ವಾಹನಗಳ ಸಂಚಾರ ನಿಧಾನಗತಿಯಲ್ಲಿತ್ತು. ದಟ್ಟಣೆಯೂ ಕಂಡುಬಂತು. ಮಡಿವಾಳ, ಪೀಣ್ಯದಲ್ಲೂ ವಾಹನಗಳ ಓಡಾಟ ನಿಧಾನಗತಿಯಲ್ಲಿತ್ತು.</p>.<p>ಮಳೆಯಿಂದಾಗಿ ರಸ್ತೆಯಲ್ಲಿ ಸಿಲುಕಿದ್ದ ಸಾರ್ವಜನಿಕರು, ಅಂಗಡಿಗಳು ಹಾಗೂ ಸೇತುವೆಗಳಡಿಯಲ್ಲಿ ಆಶ್ರಯ ಪಡೆದರು. ಕೆಲವು ರಸ್ತೆಗಳಲ್ಲಿ ಹರಿಯುತ್ತಿದ್ದ ನೀರಿನಲ್ಲೇ ಚಾಲಕರು ವಾಹನಗಳನ್ನು ಚಲಾಯಿಸಿಕೊಂಡು ಹೋದರು.</p>.<p>ಪ್ರಮುಖ ರಸ್ತೆಗಳ ಅಕ್ಕ–ಪಕ್ಕದಲ್ಲೇ ಬೈಕ್ಗಳನ್ನು ನಿಲ್ಲಿಸಿ ಸವಾರರು ಅಂಗಡಿಗಳ ಒಳಗೆ ನಿಂತುಕೊಂಡಿದ್ದು ಕಂಡುಬಂತು. </p>.<p>‘ನಗರದಲ್ಲಿ ಉತ್ತಮ ಮಳೆ ಆಗಿದೆ. ಹಾನಿ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಮಂಗಳವಾರ ರಾತ್ರಿ ಜೋರಾದ ಮಳೆ ಸುರಿದಿದ್ದು, ಹಲವೆಡೆ ರಸ್ತೆ ಮೇಲೆಯೇ ನೀರು ಹರಿಯಿತು.</p>.<p>ಬೆಳಿಗ್ಗೆಯಿಂದ ನಗರದಲ್ಲಿ ಬಿಸಿಲು ಇತ್ತು. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಂಡುಬಂತು. ಸಂಜೆ ವೇಳೆಯಲ್ಲಿ ಜಿಟಿ ಜಿಟಿಯಾಗಿ ಮಳೆ ಸುರಿಯಿತು. ರಾತ್ರಿ 9ರ ನಂತರ ಹಲವೆಡೆ ಜೋರಾದ ಮಳೆಯಾಯಿತು.</p>.<p>ಮೈಸೂರು ರಸ್ತೆಯ ನಾಯಂಡಹಳ್ಳಿ, ದೀಪಾಂಜಲಿನಗರ, ಗಿರಿನಗರ, ಹನುಮಂತನಗರ, ಬಸವನಗುಡಿ, ಜಯನಗರ, ರಾಜಾಜಿನಗರ, ವಿಜಯನಗರ, ಯಶವಂತಪುರ, ಪೀಣ್ಯ, ವಿದ್ಯಾರಣ್ಯಪುರ, ಹೆಬ್ಬಾಳ ಹಾಗೂ ಸುತ್ತಮುತ್ತ ಮಳೆ ಆಯಿತು. ಗಾಳಿಯೂ ಜೋರಾಗಿತ್ತು.</p>.<p>ನಾಯಂಡಹಳ್ಳಿ ಸಿಗ್ನಲ್ ಬಳಿ ರಸ್ತೆಯಲ್ಲೇ ಎರಡು ಅಡಿಯಷ್ಟು ನೀರು ಹರಿಯಿತು. ಅದರಿಂದಾಗಿ ಸಿಗ್ನಲ್ ಹಾಗೂ ಸುತ್ತಮುತ್ತ ವಾಹನಗಳ ಸಂಚಾರ ನಿಧಾನಗತಿಯಲ್ಲಿತ್ತು. ದಟ್ಟಣೆಯೂ ಕಂಡುಬಂತು. ಮಡಿವಾಳ, ಪೀಣ್ಯದಲ್ಲೂ ವಾಹನಗಳ ಓಡಾಟ ನಿಧಾನಗತಿಯಲ್ಲಿತ್ತು.</p>.<p>ಮಳೆಯಿಂದಾಗಿ ರಸ್ತೆಯಲ್ಲಿ ಸಿಲುಕಿದ್ದ ಸಾರ್ವಜನಿಕರು, ಅಂಗಡಿಗಳು ಹಾಗೂ ಸೇತುವೆಗಳಡಿಯಲ್ಲಿ ಆಶ್ರಯ ಪಡೆದರು. ಕೆಲವು ರಸ್ತೆಗಳಲ್ಲಿ ಹರಿಯುತ್ತಿದ್ದ ನೀರಿನಲ್ಲೇ ಚಾಲಕರು ವಾಹನಗಳನ್ನು ಚಲಾಯಿಸಿಕೊಂಡು ಹೋದರು.</p>.<p>ಪ್ರಮುಖ ರಸ್ತೆಗಳ ಅಕ್ಕ–ಪಕ್ಕದಲ್ಲೇ ಬೈಕ್ಗಳನ್ನು ನಿಲ್ಲಿಸಿ ಸವಾರರು ಅಂಗಡಿಗಳ ಒಳಗೆ ನಿಂತುಕೊಂಡಿದ್ದು ಕಂಡುಬಂತು. </p>.<p>‘ನಗರದಲ್ಲಿ ಉತ್ತಮ ಮಳೆ ಆಗಿದೆ. ಹಾನಿ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>