<p><strong>ಕೆಂಗೇರಿ</strong>: ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ಸುರಿದ ಭಾರಿ ಮಳೆಯಿಂದಾಗಿ ಕೆಂಗೇರಿ ಪೆಟ್ರೋಲ್ ಬಂಕ್ ಬಳಿಯ ಸುಮಾರು 30 ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.</p>.<p>ಪಕ್ಕದಲ್ಲೇ ಇರುವ ರಾಜಕಾಲುವೆ ತುಂಬಿ ಹರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯ, ಬಟ್ಟೆ ಹಾಗೂ ಇತರೆ ಗೃಹೋಪಯೋಗಿ ವಸ್ತುಗಳು ನೀರು ಪಾಲಾದವು. </p>.<p>ಕೆಂಗೇರಿ ಗುಟ್ಟೆ ಆಂಜನೇಯ ಸ್ವಾಮಿ ಬೀದಿ ಬಳಿಯ ರಸ್ತೆಗಳಲ್ಲೂ ರಾಜಕಾಲುವೆ ನೀರು ಹರಿದು ಸುತ್ತಮುತ್ತಲ ಒಂಬತ್ತು ಮನೆಗಳಿಗೆ ನೀರು ನುಗ್ಗಿತು. ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳು ಹಾಳಾಗಿವೆ ಎಂದು ಸ್ಥಳೀಯ ನಿವಾಸಿ ವೇಣು ಮಾಧವ ಭಟ್ ಅವಲತ್ತುಕೊಂಡರು. </p>.<p>‘ವಿಜಯಶ್ರೀ ಬಡಾವಣೆಯ 5, 6 ಮತ್ತು 7ನೇ ಅಡ್ಡರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೆಲ ಮನೆಯ ಫ್ರಿಜ್, ಟಿವಿಗಳಿಗೆ ಹಾನಿಯಾಗಿದೆ. ಸಮೀಪದಲ್ಲಿರುವ ವೆಂಕಟೇಶ್ವರ ದೇವಾಲಯ ಸಮೀಪದಲ್ಲಿ 2 ಅಡಿಗೂ ಹೆಚ್ಚು ನೀರು ಸಂಗ್ರಹಗೊಂಡಿತ್ತು‘ ಎಂದು ಸ್ಥಳೀಯ ಮುಖಂಡ ಮೈಲಸಂದ್ರ ನಾಗರಾಜ್ ತಿಳಿಸಿದರು.</p>.<p class="Subhead">ಶಾಸಕರ ನೆರವು: ಮಳೆಯಿಂದ ಸಮಸ್ಯೆಗೆ ಈಡಾದ ಸ್ಥಳಗಳಿಗೆ ಭೇಟಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಸಿಬ್ಬಂದಿ ನೆರವಿನೊಂದಿಗೆ ಮಳೆ ನೀರು ತೆರವುಗೊಳಿಸಿದರು.</p>.<p class="Subhead">‘ಮಳೆ ನೀರು ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬಾಧಿತವಾದ ಕುಟುಂಬಗಳಿಗೆ ದಿನಸಿ ಸಾಮಗ್ರಿ ವಿತರಿಸಲಾಗುವುದು’ ಎಂದು ಶಾಸಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ಸುರಿದ ಭಾರಿ ಮಳೆಯಿಂದಾಗಿ ಕೆಂಗೇರಿ ಪೆಟ್ರೋಲ್ ಬಂಕ್ ಬಳಿಯ ಸುಮಾರು 30 ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.</p>.<p>ಪಕ್ಕದಲ್ಲೇ ಇರುವ ರಾಜಕಾಲುವೆ ತುಂಬಿ ಹರಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯ, ಬಟ್ಟೆ ಹಾಗೂ ಇತರೆ ಗೃಹೋಪಯೋಗಿ ವಸ್ತುಗಳು ನೀರು ಪಾಲಾದವು. </p>.<p>ಕೆಂಗೇರಿ ಗುಟ್ಟೆ ಆಂಜನೇಯ ಸ್ವಾಮಿ ಬೀದಿ ಬಳಿಯ ರಸ್ತೆಗಳಲ್ಲೂ ರಾಜಕಾಲುವೆ ನೀರು ಹರಿದು ಸುತ್ತಮುತ್ತಲ ಒಂಬತ್ತು ಮನೆಗಳಿಗೆ ನೀರು ನುಗ್ಗಿತು. ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳು ಹಾಳಾಗಿವೆ ಎಂದು ಸ್ಥಳೀಯ ನಿವಾಸಿ ವೇಣು ಮಾಧವ ಭಟ್ ಅವಲತ್ತುಕೊಂಡರು. </p>.<p>‘ವಿಜಯಶ್ರೀ ಬಡಾವಣೆಯ 5, 6 ಮತ್ತು 7ನೇ ಅಡ್ಡರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೆಲ ಮನೆಯ ಫ್ರಿಜ್, ಟಿವಿಗಳಿಗೆ ಹಾನಿಯಾಗಿದೆ. ಸಮೀಪದಲ್ಲಿರುವ ವೆಂಕಟೇಶ್ವರ ದೇವಾಲಯ ಸಮೀಪದಲ್ಲಿ 2 ಅಡಿಗೂ ಹೆಚ್ಚು ನೀರು ಸಂಗ್ರಹಗೊಂಡಿತ್ತು‘ ಎಂದು ಸ್ಥಳೀಯ ಮುಖಂಡ ಮೈಲಸಂದ್ರ ನಾಗರಾಜ್ ತಿಳಿಸಿದರು.</p>.<p class="Subhead">ಶಾಸಕರ ನೆರವು: ಮಳೆಯಿಂದ ಸಮಸ್ಯೆಗೆ ಈಡಾದ ಸ್ಥಳಗಳಿಗೆ ಭೇಟಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಸಿಬ್ಬಂದಿ ನೆರವಿನೊಂದಿಗೆ ಮಳೆ ನೀರು ತೆರವುಗೊಳಿಸಿದರು.</p>.<p class="Subhead">‘ಮಳೆ ನೀರು ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬಾಧಿತವಾದ ಕುಟುಂಬಗಳಿಗೆ ದಿನಸಿ ಸಾಮಗ್ರಿ ವಿತರಿಸಲಾಗುವುದು’ ಎಂದು ಶಾಸಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>