ಸದಸ್ಯತ್ವದಿಂದ ಅನರ್ಹಗೊಂಡಿರುವುದರಿಂದ ಕ್ಷೇತ್ರಗಳಲ್ಲಿ ಅಧಿಕಾರಿಗಳ ಸಭೆ ನಡೆಸಲು, ಯಾವುದೇ ಸಲಹೆ, ಸೂಚನೆ ನೀಡಲು ಸಾಧ್ಯವಾಗುತ್ತಿಲ್ಲ. ಕ್ಷೇತ್ರದ ಶಾಸಕರಲ್ಲ ಎಂಬ ಕಾರಣಕ್ಕೆ, ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.
ಮಳೆ ಅನಾಹುತದಿಂದ ತತ್ತರಿಸಿರುವ ಕ್ಷೇತ್ರಗಳ ಕಡೆ ಗಮನ ಹರಿಸಲು ಸಚಿವರಿಲ್ಲ, ಶಾಸಕರೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಜನರು ಪರಿಹಾರಕ್ಕಾಗಿ ಪರಿತಪಿಸುವುದು ಮಾತ್ರ ತಪ್ಪಿಲ್ಲ.