‘ಈಗಾಗಲೇ ಎಲ್ಲ ವಲಯಗಳಲ್ಲಿನ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ವಲಯ ಮತ್ತು ವಿಭಾಗ ಮಟ್ಟದಲ್ಲಿ ಹಾಗೂ ಕೇಂದ್ರ ಕಚೇರಿಯಲ್ಲಿರುವ ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ಸ್ಥಳಗಳಲ್ಲಿ ಮರಗಳು ಬೀಳುವುದನ್ನು ಪತ್ತೆ ಮಾಡಲಾಗಿದೆ. ಭಾನುವಾರ ರಾತ್ರಿ ಉತ್ತರಹಳ್ಳಿಯಲ್ಲಿ ಭಾರಿ ಮಳೆಯಿಂದ ರಾಜಕಾಲುವೆಯಲ್ಲಿ ನೀರು ಮನೆಗಳಿಗೆ ನುಗ್ಗಿತ್ತು. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮುಖ್ಯ ಎಂಜಿನಿಯರ್ಗಳಿಗೆ ಸೂಚಿಸಲಾಗಿದೆ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.