<p>ಬೆಂಗಳೂರು: ನಗರದಲ್ಲಿ ಗುರುವಾರ ಮೋಡ ಕವಿದ ವಾತಾವರಣ ಕಂಡುಬಂದು, ಸಂಜೆ ವೇಳೆ ಹಲವೆಡೆ ಮಳೆ ಸುರಿಯಿತು.</p>.<p>ಬುಧವಾರವೂ ನಗರದ ಹಲವೆಡೆ ಜೋರು ಮಳೆಯಾಗಿತ್ತು. ಗುರುವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು.</p>.<p>ಹೆಣ್ಣೂರು, ಕೆ. ನಾರಾಯಣಪುರ, ಥಣಿಸಂದ್ರ, ಮಹಾಲಕ್ಷ್ಮಿ ಲೇಔಟ್, ಬನಶಂಕರಿ, ಪೀಣ್ಯ, ದಾಸರಹಳ್ಳಿ, ಜಾಲಹಳ್ಳಿ ಹಾಗೂ ಹಲವೆಡೆ ಮಳೆ ಆಯಿತು. ಸಿಡಿಲು–ಗುಡುಗು ಸಹ ಇತ್ತು.</p>.<p>‘ಚಂಡಮಾರು ಪರಿಣಾಮದಿಂದಾಗಿ ರಾಜ್ಯದ ಹಲವೆಡೆ ಮತ್ತಷ್ಟು ದಿನ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ, ‘ನಗರದಲ್ಲಿ ಬುಧವಾರ ಜೋರು ಮಳೆ ಇತ್ತು. ಗುರುವಾರ ಮಳೆ ಪ್ರಮಾಣ ಕಡಿಮೆ ಇತ್ತು. ಹೀಗಾಗಿ, ಯಾವುದೇ ದೂರುಗಳು ಬಂದಿಲ್ಲ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದಲ್ಲಿ ಗುರುವಾರ ಮೋಡ ಕವಿದ ವಾತಾವರಣ ಕಂಡುಬಂದು, ಸಂಜೆ ವೇಳೆ ಹಲವೆಡೆ ಮಳೆ ಸುರಿಯಿತು.</p>.<p>ಬುಧವಾರವೂ ನಗರದ ಹಲವೆಡೆ ಜೋರು ಮಳೆಯಾಗಿತ್ತು. ಗುರುವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು.</p>.<p>ಹೆಣ್ಣೂರು, ಕೆ. ನಾರಾಯಣಪುರ, ಥಣಿಸಂದ್ರ, ಮಹಾಲಕ್ಷ್ಮಿ ಲೇಔಟ್, ಬನಶಂಕರಿ, ಪೀಣ್ಯ, ದಾಸರಹಳ್ಳಿ, ಜಾಲಹಳ್ಳಿ ಹಾಗೂ ಹಲವೆಡೆ ಮಳೆ ಆಯಿತು. ಸಿಡಿಲು–ಗುಡುಗು ಸಹ ಇತ್ತು.</p>.<p>‘ಚಂಡಮಾರು ಪರಿಣಾಮದಿಂದಾಗಿ ರಾಜ್ಯದ ಹಲವೆಡೆ ಮತ್ತಷ್ಟು ದಿನ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ, ‘ನಗರದಲ್ಲಿ ಬುಧವಾರ ಜೋರು ಮಳೆ ಇತ್ತು. ಗುರುವಾರ ಮಳೆ ಪ್ರಮಾಣ ಕಡಿಮೆ ಇತ್ತು. ಹೀಗಾಗಿ, ಯಾವುದೇ ದೂರುಗಳು ಬಂದಿಲ್ಲ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>