ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲವೆಡೆ ತುಂತುರು, ಹಲವೆಡೆ ಜೋರು ಮಳೆ: ವಾಹನ ಸವಾರರ ಪರದಾಟ

Last Updated 1 ಸೆಪ್ಟೆಂಬರ್ 2021, 21:54 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಬುಧವಾರ ಸಂಜೆಯಿಂದ ರಾತ್ರಿಯ ವರೆಗೂ ಮಳೆ ಆಗಿದ್ದು, ಹಲವೆಡೆ ಕಾಲುವೆಗಳು ತುಂಬಿ ರಸ್ತೆ ಮೇಲೆ ಧಾರಾಕಾರವಾಗಿ ನೀರು ಹರಿಯಿತು. ಮಧ್ಯಾಹ್ನ ಕೆಲವೆಡೆ ತುಂತುರು ಮಳೆಯಾಯಿತು. ಸಂಜೆ ನಂತರ ಹಲವೆಡೆ ಜೋರು ಮಳೆ ಸುರಿಯಿತು.

ಯಶವಂತಪುರ, ಮಹಾಲಕ್ಷ್ಮಿಲೇಔಟ್, ಬಸವೇಶ್ವರನಗರ, ರಾಜಾಜಿನಗರ, ವಿಜಯನಗರ, ಮಲ್ಲೇಶ್ವರ, ಆರ್‌.ಟಿ.ನಗರ, ಪೀಣ್ಯ, ಹೆಬ್ಬಾಳ, ಬಸವನಗುಡಿ, ಎಂ.ಜಿ.ರಸ್ತೆ, ಶಿವಾಜಿನಗರ, ಅಶೋಕನಗರ, ಎಚ್‌ಎಎಲ್‌ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮಳೆಯಾಗಿದೆ.

ಮೆಜೆಸ್ಟಿಕ್, ಶಿವಾನಂದ ವೃತ್ತದ ಕೆಳಸೇತುವೆಯಲ್ಲಿ ಮಳೆ ನೀರು ಹರಿಯಿತು. ಅಂಥ ನೀರಿನಲ್ಲೇ ಚಾಲಕರು ವಾಹನಗಳನ್ನು ಚಲಾ ಯಿಸಿಕೊಂಡು ಹೋದರು. ಕೆಲ ವಾಹನಗಳು ಕೆಟ್ಟು ನಿಂತಿದ್ದರಿಂದ, ದಟ್ಟಣೆಯೂ ಉಂಟಾಯಿತು. ‘ನಗರದಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚು ಹಾನಿ ಯಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿ ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT