<p><strong>ಬೊಮ್ಮನಹಳ್ಳಿ</strong>: ಬೊಮ್ಮನಹಳ್ಳಿ ಭಾಗದಲ್ಲಿ ಭಾನುವಾರ ಸುರಿದ ಮಳೆಯು ಸಾರ್ವಜನಿಕರಲ್ಲಿ ಖುಷಿ ತರಿಸಿತು. ಆದರೆ, ಕೇವಲ 15 ನಿಮಿಷ ಬಿರುಸಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಬಿಳೇಕಹಳ್ಳಿಯ ತಗ್ಗು ಪ್ರದೇಶಗಳ ರಸ್ತೆಗಳು ಮಳೆಯಿಂದಾಗಿ ಜಲಾವೃತವಾಗಿದ್ದವು. ಸಾಧಾರಣ ಮಳೆಯಾದರೂ ಚರಂಡಿಗಳಲ್ಲಿ ಹೂಳು ತುಂಬಿದ್ದರಿಂದ ಮಳೆ ನೀರು ರಸ್ತೆಗಳಲ್ಲಿ ಹರಿದಿದೆ. ಬಂಡೇಪಾಳ್ಯದ ಕೊಳೆಗೇರಿ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನ ತೊಂದರೆ ಅನುಭವಿಸಿದರು.</p>.<p>‘ಚರಂಡಿ ನೀರು ಮನೆಗೆ ನುಗ್ಗಿ ಮನೆಯಲ್ಲಾ ಗಬ್ಬು ವಾಸನೆ, ಚರಂಡಿ ಹೂಳು ತೆಗೆದಿದ್ದರೆ ತೊಂದರೆ ಆಗುತ್ತಿರಲಿಲ್ಲ, ಆದರೆ, ಬಿಬಿಎಂಪಿಯವರು ಬಡವರು ವಾಸ ಮಾಡುವ ಕಾಲೊನಿ ಕಡೆ ಕಾಲಿಡೋದು ಅಪರೂಪ ಏನ್ಮಾಡೋದು’ ಎಂದು ಬಂಡೇಪಾಳ್ಯ ನಿವಾಸಿ ಗೌರಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.</p>.<p>‘ಮಳೆ ಆರಂಭವಾದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆಯೇ ಚರಂಡಿ ಹೂಳು ತೆಗೆಯುವಂತೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ, ಯಾವುದೇ ಕ್ರಮವಹಿಸಲಿಲ್ಲ. ಹೀಗಾಗಿ ಸಣ್ಣ ಮಳೆ ಸುರಿದರೂ ತೊಂದರೆ ಅನುಭವಿಸುವಂತಾಗಿದೆ’ ಎಂದು ಬಂಡೇಪಾಳ್ಯ ನಿವಾಸಿ ರಾಮಚಂದ್ರ ಹೇಳಿದರು.</p>.<p>‘ಚರಂಡಿ ಹೂಳು ತೆಗೆಯಲು ಯಾವುದೇ ಕಾರ್ಯಾದೇಶ ಈವರೆಗೂ ಬಂದಿಲ್ಲ. ಹೀಗಾಗಿ ಕೆಲಸ ಕೈಗೆತ್ತಿಕೊಳ್ಳಲು ಆಗುತ್ತಿಲ್ಲ. ಮೇಲಧಿಕಾರಿಗಳ ಜತೆ ಚರ್ಚಿಸಿ ಕ್ರಮವಹಿಸುತ್ತೇವೆ’ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜು ಹೇಳಿದರು.</p>.<p>‘ಮಳೆ ಕೊರತೆಯಿಂದ ಈ ಭಾಗದಲ್ಲಿ ಅಂತರ್ಜಲ ಪೂರ್ತಿಯಾಗಿ ಕುಸಿದಿದೆ. ಇದೀಗ ಮಳೆ ಆರಂಭ ಆಗಿರುವುದರಿಂದ ಅಂತರ್ಜಲ ಮರುಪೂರಣ ಆಗುವ ನಿರೀಕ್ಷೆ ಹೊಂದಿದ್ದೇವೆ’ ಎನ್ನುತ್ತಾರೆ ಮೈಕೊ ಬಡಾವಣೆ ನಿವಾಸಿ ಮಹಮ್ಮದ್ ರಫೀಕ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ</strong>: ಬೊಮ್ಮನಹಳ್ಳಿ ಭಾಗದಲ್ಲಿ ಭಾನುವಾರ ಸುರಿದ ಮಳೆಯು ಸಾರ್ವಜನಿಕರಲ್ಲಿ ಖುಷಿ ತರಿಸಿತು. ಆದರೆ, ಕೇವಲ 15 ನಿಮಿಷ ಬಿರುಸಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಬಿಳೇಕಹಳ್ಳಿಯ ತಗ್ಗು ಪ್ರದೇಶಗಳ ರಸ್ತೆಗಳು ಮಳೆಯಿಂದಾಗಿ ಜಲಾವೃತವಾಗಿದ್ದವು. ಸಾಧಾರಣ ಮಳೆಯಾದರೂ ಚರಂಡಿಗಳಲ್ಲಿ ಹೂಳು ತುಂಬಿದ್ದರಿಂದ ಮಳೆ ನೀರು ರಸ್ತೆಗಳಲ್ಲಿ ಹರಿದಿದೆ. ಬಂಡೇಪಾಳ್ಯದ ಕೊಳೆಗೇರಿ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನ ತೊಂದರೆ ಅನುಭವಿಸಿದರು.</p>.<p>‘ಚರಂಡಿ ನೀರು ಮನೆಗೆ ನುಗ್ಗಿ ಮನೆಯಲ್ಲಾ ಗಬ್ಬು ವಾಸನೆ, ಚರಂಡಿ ಹೂಳು ತೆಗೆದಿದ್ದರೆ ತೊಂದರೆ ಆಗುತ್ತಿರಲಿಲ್ಲ, ಆದರೆ, ಬಿಬಿಎಂಪಿಯವರು ಬಡವರು ವಾಸ ಮಾಡುವ ಕಾಲೊನಿ ಕಡೆ ಕಾಲಿಡೋದು ಅಪರೂಪ ಏನ್ಮಾಡೋದು’ ಎಂದು ಬಂಡೇಪಾಳ್ಯ ನಿವಾಸಿ ಗೌರಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.</p>.<p>‘ಮಳೆ ಆರಂಭವಾದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆಯೇ ಚರಂಡಿ ಹೂಳು ತೆಗೆಯುವಂತೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ, ಯಾವುದೇ ಕ್ರಮವಹಿಸಲಿಲ್ಲ. ಹೀಗಾಗಿ ಸಣ್ಣ ಮಳೆ ಸುರಿದರೂ ತೊಂದರೆ ಅನುಭವಿಸುವಂತಾಗಿದೆ’ ಎಂದು ಬಂಡೇಪಾಳ್ಯ ನಿವಾಸಿ ರಾಮಚಂದ್ರ ಹೇಳಿದರು.</p>.<p>‘ಚರಂಡಿ ಹೂಳು ತೆಗೆಯಲು ಯಾವುದೇ ಕಾರ್ಯಾದೇಶ ಈವರೆಗೂ ಬಂದಿಲ್ಲ. ಹೀಗಾಗಿ ಕೆಲಸ ಕೈಗೆತ್ತಿಕೊಳ್ಳಲು ಆಗುತ್ತಿಲ್ಲ. ಮೇಲಧಿಕಾರಿಗಳ ಜತೆ ಚರ್ಚಿಸಿ ಕ್ರಮವಹಿಸುತ್ತೇವೆ’ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜು ಹೇಳಿದರು.</p>.<p>‘ಮಳೆ ಕೊರತೆಯಿಂದ ಈ ಭಾಗದಲ್ಲಿ ಅಂತರ್ಜಲ ಪೂರ್ತಿಯಾಗಿ ಕುಸಿದಿದೆ. ಇದೀಗ ಮಳೆ ಆರಂಭ ಆಗಿರುವುದರಿಂದ ಅಂತರ್ಜಲ ಮರುಪೂರಣ ಆಗುವ ನಿರೀಕ್ಷೆ ಹೊಂದಿದ್ದೇವೆ’ ಎನ್ನುತ್ತಾರೆ ಮೈಕೊ ಬಡಾವಣೆ ನಿವಾಸಿ ಮಹಮ್ಮದ್ ರಫೀಕ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>