ಶಿವಾನಂದ ವೃತ್ತದಲ್ಲಿ ರೈಲ್ವೆ ಸೇತುವೆ ಕೆಳಗೆ ನೀರು ಹೆಚ್ಚಾಗಿದ್ದರಿಂದ ಕಾರುಗಳು ನೀರಿನಲ್ಲಿ ಸಿಲುಕಿ ಸವಾರರು ಪರದಾಡಿದರು. ನಾಗರಬಾವಿ,ಮೆಜೆಸ್ಟಿಕ್, ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಗಿರಿನಗರ, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್.ಆರ್. ನಗರ ಸೇರಿದಂತೆ ನಗರದ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ.