<p><strong>ಬೆಂಗಳೂರು</strong>: ಕೊಡಗು ಜಿಲ್ಲೆ ಮತ್ತು ಕೇರಳದ ವಯನಾಡು ಪ್ರದೇಶದಲ್ಲಿ ಮಳೆಯಾಗುತ್ತಿರುವ ಕಾರಣ ಕೆಆರ್ಎಸ್ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ.</p><p>ವಾರದಿಂದೀಚೆಗೆ ಜಲಾಶಯಕ್ಕೆ 2 ಅಡಿ ನೀರು ಹರಿದು ಬಂದಿದೆ. ಜಲಾಶಯದ ನೀರಿನ ಮಟ್ಟ ಭಾನುವಾರ 82.30 ಅಡಿಗೆ ತಲುಪಿದ್ದು 3,405 ಕ್ಯುಸೆಕ್ ಒಳಹರಿವು, 533 ಕ್ಯುಸೆಕ್ ಹೊರಹರಿವು ಇತ್ತು. ಈ ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 124.80 ಅಡಿಗಳು.</p><p>ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆ ಸುರಿಯಿತು. ನೆಲ ತಂಪಾಯಿತು. </p><p>ಕಲಬುರಗಿ ಜಿಲ್ಲೆಯ ಚಿಂಚೋಳಿ, ಯಾದಗಿರಿ ಹಾಗೂ ದೇವದುರ್ಗ ಸೇರಿದಂತೆ ಹಲವೆಡೆ ಗುಡುಗು ಸಿಡಿಲಿ ನೊಂದಿಗೆ ಧಾರಾಕಾರ ಮಳೆಯಾಗಿದೆ.</p><p>ಯಾದಗಿರಿ ನಗರದ ರೈಲು ನಿಲ್ದಾಣ ಮತ್ತು ಹಳೆ ಬಸ್ ನಿಲ್ದಾಣದ ರಸ್ತೆ ಜಲಾವೃತಗೊಂಡಿತು. ಚರಂಡಿ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿತು. </p><p>ಅಲ್ಲಿಪುರ ಗ್ರಾಮದಲ್ಲಿ ಆಟೊ, ಟ್ರ್ಯಾಕ್ಟರ್ ಮೇಲೆ ಮರ ಉರುಳಿ ಬಿದ್ದಿದೆ. ಹಲವು ಗ್ರಾಮಗಳಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. </p><p>ಕಲಬುರಗಿ ಜಿಲ್ಲೆಯ ವಾಡಿ ಸಮೀಪದ ಲಾಡ್ಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಸತೀಶ ಪ್ರಹ್ಲಾದ್ (43) ಹಾಗೂ ಪ್ರಕಾಶ ಏಕನಾಥ (50) ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೊಡಗು ಜಿಲ್ಲೆ ಮತ್ತು ಕೇರಳದ ವಯನಾಡು ಪ್ರದೇಶದಲ್ಲಿ ಮಳೆಯಾಗುತ್ತಿರುವ ಕಾರಣ ಕೆಆರ್ಎಸ್ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ.</p><p>ವಾರದಿಂದೀಚೆಗೆ ಜಲಾಶಯಕ್ಕೆ 2 ಅಡಿ ನೀರು ಹರಿದು ಬಂದಿದೆ. ಜಲಾಶಯದ ನೀರಿನ ಮಟ್ಟ ಭಾನುವಾರ 82.30 ಅಡಿಗೆ ತಲುಪಿದ್ದು 3,405 ಕ್ಯುಸೆಕ್ ಒಳಹರಿವು, 533 ಕ್ಯುಸೆಕ್ ಹೊರಹರಿವು ಇತ್ತು. ಈ ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 124.80 ಅಡಿಗಳು.</p><p>ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆ ಸುರಿಯಿತು. ನೆಲ ತಂಪಾಯಿತು. </p><p>ಕಲಬುರಗಿ ಜಿಲ್ಲೆಯ ಚಿಂಚೋಳಿ, ಯಾದಗಿರಿ ಹಾಗೂ ದೇವದುರ್ಗ ಸೇರಿದಂತೆ ಹಲವೆಡೆ ಗುಡುಗು ಸಿಡಿಲಿ ನೊಂದಿಗೆ ಧಾರಾಕಾರ ಮಳೆಯಾಗಿದೆ.</p><p>ಯಾದಗಿರಿ ನಗರದ ರೈಲು ನಿಲ್ದಾಣ ಮತ್ತು ಹಳೆ ಬಸ್ ನಿಲ್ದಾಣದ ರಸ್ತೆ ಜಲಾವೃತಗೊಂಡಿತು. ಚರಂಡಿ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿತು. </p><p>ಅಲ್ಲಿಪುರ ಗ್ರಾಮದಲ್ಲಿ ಆಟೊ, ಟ್ರ್ಯಾಕ್ಟರ್ ಮೇಲೆ ಮರ ಉರುಳಿ ಬಿದ್ದಿದೆ. ಹಲವು ಗ್ರಾಮಗಳಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. </p><p>ಕಲಬುರಗಿ ಜಿಲ್ಲೆಯ ವಾಡಿ ಸಮೀಪದ ಲಾಡ್ಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಸತೀಶ ಪ್ರಹ್ಲಾದ್ (43) ಹಾಗೂ ಪ್ರಕಾಶ ಏಕನಾಥ (50) ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>