<p><strong>ಬೆಂಗಳೂರು:</strong> ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಗೆ ಒಳಗಾದ ಬಿಳೇಕಹಳ್ಳಿ ಮತ್ತು ಕೋಡಿಚಿಕ್ಕನಹಳ್ಳಿಗೆ ಮಂಗಳವಾರ ಭೇಟಿ ನೀಡಿದ ಮೇಯರ್ ಗಂಗಾಂಬಿಕೆ ಅವರಿಗೆ ನಿವಾಸಿಗಳು ಸಮಸ್ಯೆಯ ಗಂಭೀರತೆಯನ್ನು ಮನದಟ್ಟು ಮಾಡಿದರು.</p>.<p>‘ಕೋಡಿಚಿಕ್ಕನಹಳ್ಳಿ ಮುಖ್ಯರಸ್ತೆಯ ಚರಂಡಿಗಳ ಹೂಳು ತೆಗೆದು ನಾಲ್ಕು ವರ್ಷಗಳೇ ಕಳೆದಿವೆ. ಮಳೆನೀರು ಹರಿಯುವುದಾದರೂ ಹೇಗೆ? ಎಂದು ಸ್ಥಳೀಯರು ಪ್ರಶ್ನಿಸಿದರು. ಈ ಬಗ್ಗೆ ಅಧಿಕಾರಿಗಳನ್ನು ಮೇಯರ್ ಕೇಳಿದಾಗ,‘ಈ ರಸ್ತೆಯು ಪಾಲಿಕೆಯ ಮುಖ್ಯ ರಸ್ತೆಗಳ ವಿಭಾಗಕ್ಕೆ ಬರುತ್ತದೆ’ ಎಂದು ವಲಯ ಅಧಿಕಾರಿಗಳು ನುಣಿಚಿಕೊಂಡರು. ಆದರೆ, ಮುಖ್ಯರಸ್ತೆಗಳ ವಿಭಾಗದ ಒಬ್ಬ ಅಧಿಕಾರಿಯೂ ಸ್ಥಳದಲ್ಲಿ ಇರಲಿಲ್ಲ.</p>.<p>ಮೇಯರ್ ಭೇಟಿ ಹಿನ್ನೆಲೆಯಲ್ಲಿ ಚರಂಡಿ ಹೂಳು ತೆಗೆಯಲು ಪೌರಕಾರ್ಮಿಕರನ್ನು ನಿಯೋಜಿಸಲಾಗಿತ್ತು. ಹೆಸರು ಹೇಳಲು ಇಚ್ಚಿಸದ ಕಾರ್ಮಿಕರೊಬ್ಬರು,‘ಚರಂಡಿಲೀ ನಾಲ್ಕೂವರೆ ಅಡಿ ಮಣ್ಣು ಸೇರ್ಕಂಡದೆ, ಕ್ಲೀನ್ ಮಾಡೋದೆಂಗೆ ಹೇಳಿ’ ಎಂದು ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟರು.</p>.<p>ಕೋಡಿಚಿಕ್ಕನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ಮೇಯರ್ ಭೇಟಿ ನೀಡಿದಾಗ ಕೇಂದ್ರದಲ್ಲಿ ಮಕ್ಕಳು ಇರಲಿಲ್ಲ. ‘ಕೇಂದ್ರಕ್ಕೆ ಚರಂಡಿ ನೀರು ತುಂಬಿತ್ತು. ಸೋಂಕು ತಗುಲಬಹುದೆಂದು ಈ ದಿನ ರಜೆ ನೀಡಿದ್ದೇವೆ’ ಎಂದು ಮೇಲ್ವಿಚಾರಕಿ ಸಮಜಾಯಿಷಿ ನೀಡಿದರು.</p>.<p>ಮೇಯರ್ ಗಂಗಾಂಬಿಕೆ,‘ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸಾಧಾರಣ ಮಳೆಗೂ ಈ ಪರಿ ಸಮಸ್ಯೆ ಸೃಷ್ಟಿಯಾಗುವುದಾರೆ, ಭಾರಿ ಮಳೆ ಬಂದಾಗ ಗತಿ ಏನು? ಎಂದು ಅಧಿಕಾರಿಗಳನ್ನು ಪ್ರಶ್ನಿಸುತ್ತಲೇ, ಇಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ’ ಎಂದರು. ಅಲ್ಲಲ್ಲಿ ತೆರೆದುಕೊಂಡಿದ್ದ ಚರಂಡಿಗಳನ್ನು ಮುಚ್ಚುವಂತೆ ಆದೇಶಿದರು.</p>.<p>ಪಾಲಿಕೆಯ ಸ್ಥಳೀಯ ಸದಸ್ಯ ನಾರಾಯಣರಾಜು ಅವರು ಪರಿಶೀಲನೆ ವೇಳೆ ಸ್ಥಳಕ್ಕೆ ಬರಲಿಲ್ಲ.</p>.<p class="Subhead"><strong>ಮನೆಗೆ ನೀರು ನುಗ್ಗಲು ಕಾರಣ:</strong>‘ಕೋಡಿಚಿಕ್ಕನಹಳ್ಳಿ ಮುಖ್ಯರಸ್ತೆಯು ಶನಿ ಮಹಾತ್ಮ ದೇವಸ್ಥಾನದಿಂದ ಅನುಗ್ರಹ ಅಪಾರ್ಟ್ಮೆಂಟ್ ಸಮುಚ್ಚಯದವರೆಗೂ ಇಳಿಜಾರು ಪ್ರದೇಶದಲ್ಲಿದೆ. ರಸ್ತೆಯೂ ಕಿರಿದಾಗಿದೆ. ಹಾಗಾಗಿ ಮಳೆನೀರು ಮನೆಗಳಿಗೆ ನುಗ್ಗುತ್ತಿದೆ’ ಎಂದು ಕಾರ್ಯಪಾಲಕ ಎಂಜಿನಿಯರ್ ಅಶೋಕ್ ತಿಳಿಸಿದರು.</p>.<p>‘ಇಲ್ಲಿನ 800 ಮೀಟರ್ ಉದ್ದದ ರಸ್ತೆಯೂ ಮೂರೂವರೆ ಮೀಟರ್ನಷ್ಟು ಇಳಿಜಾರಿನಲ್ಲಿದೆ. ರಸ್ತೆ ಅಗಲ ಕೇವಲ 16 ಅಡಿ. ಇಲ್ಲಿ ರಸ್ತೆ ಮತ್ತು ಚರಂಡಿ ವೀಸ್ತರಣೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಗೆ ಒಳಗಾದ ಬಿಳೇಕಹಳ್ಳಿ ಮತ್ತು ಕೋಡಿಚಿಕ್ಕನಹಳ್ಳಿಗೆ ಮಂಗಳವಾರ ಭೇಟಿ ನೀಡಿದ ಮೇಯರ್ ಗಂಗಾಂಬಿಕೆ ಅವರಿಗೆ ನಿವಾಸಿಗಳು ಸಮಸ್ಯೆಯ ಗಂಭೀರತೆಯನ್ನು ಮನದಟ್ಟು ಮಾಡಿದರು.</p>.<p>‘ಕೋಡಿಚಿಕ್ಕನಹಳ್ಳಿ ಮುಖ್ಯರಸ್ತೆಯ ಚರಂಡಿಗಳ ಹೂಳು ತೆಗೆದು ನಾಲ್ಕು ವರ್ಷಗಳೇ ಕಳೆದಿವೆ. ಮಳೆನೀರು ಹರಿಯುವುದಾದರೂ ಹೇಗೆ? ಎಂದು ಸ್ಥಳೀಯರು ಪ್ರಶ್ನಿಸಿದರು. ಈ ಬಗ್ಗೆ ಅಧಿಕಾರಿಗಳನ್ನು ಮೇಯರ್ ಕೇಳಿದಾಗ,‘ಈ ರಸ್ತೆಯು ಪಾಲಿಕೆಯ ಮುಖ್ಯ ರಸ್ತೆಗಳ ವಿಭಾಗಕ್ಕೆ ಬರುತ್ತದೆ’ ಎಂದು ವಲಯ ಅಧಿಕಾರಿಗಳು ನುಣಿಚಿಕೊಂಡರು. ಆದರೆ, ಮುಖ್ಯರಸ್ತೆಗಳ ವಿಭಾಗದ ಒಬ್ಬ ಅಧಿಕಾರಿಯೂ ಸ್ಥಳದಲ್ಲಿ ಇರಲಿಲ್ಲ.</p>.<p>ಮೇಯರ್ ಭೇಟಿ ಹಿನ್ನೆಲೆಯಲ್ಲಿ ಚರಂಡಿ ಹೂಳು ತೆಗೆಯಲು ಪೌರಕಾರ್ಮಿಕರನ್ನು ನಿಯೋಜಿಸಲಾಗಿತ್ತು. ಹೆಸರು ಹೇಳಲು ಇಚ್ಚಿಸದ ಕಾರ್ಮಿಕರೊಬ್ಬರು,‘ಚರಂಡಿಲೀ ನಾಲ್ಕೂವರೆ ಅಡಿ ಮಣ್ಣು ಸೇರ್ಕಂಡದೆ, ಕ್ಲೀನ್ ಮಾಡೋದೆಂಗೆ ಹೇಳಿ’ ಎಂದು ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟರು.</p>.<p>ಕೋಡಿಚಿಕ್ಕನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ಮೇಯರ್ ಭೇಟಿ ನೀಡಿದಾಗ ಕೇಂದ್ರದಲ್ಲಿ ಮಕ್ಕಳು ಇರಲಿಲ್ಲ. ‘ಕೇಂದ್ರಕ್ಕೆ ಚರಂಡಿ ನೀರು ತುಂಬಿತ್ತು. ಸೋಂಕು ತಗುಲಬಹುದೆಂದು ಈ ದಿನ ರಜೆ ನೀಡಿದ್ದೇವೆ’ ಎಂದು ಮೇಲ್ವಿಚಾರಕಿ ಸಮಜಾಯಿಷಿ ನೀಡಿದರು.</p>.<p>ಮೇಯರ್ ಗಂಗಾಂಬಿಕೆ,‘ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸಾಧಾರಣ ಮಳೆಗೂ ಈ ಪರಿ ಸಮಸ್ಯೆ ಸೃಷ್ಟಿಯಾಗುವುದಾರೆ, ಭಾರಿ ಮಳೆ ಬಂದಾಗ ಗತಿ ಏನು? ಎಂದು ಅಧಿಕಾರಿಗಳನ್ನು ಪ್ರಶ್ನಿಸುತ್ತಲೇ, ಇಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ’ ಎಂದರು. ಅಲ್ಲಲ್ಲಿ ತೆರೆದುಕೊಂಡಿದ್ದ ಚರಂಡಿಗಳನ್ನು ಮುಚ್ಚುವಂತೆ ಆದೇಶಿದರು.</p>.<p>ಪಾಲಿಕೆಯ ಸ್ಥಳೀಯ ಸದಸ್ಯ ನಾರಾಯಣರಾಜು ಅವರು ಪರಿಶೀಲನೆ ವೇಳೆ ಸ್ಥಳಕ್ಕೆ ಬರಲಿಲ್ಲ.</p>.<p class="Subhead"><strong>ಮನೆಗೆ ನೀರು ನುಗ್ಗಲು ಕಾರಣ:</strong>‘ಕೋಡಿಚಿಕ್ಕನಹಳ್ಳಿ ಮುಖ್ಯರಸ್ತೆಯು ಶನಿ ಮಹಾತ್ಮ ದೇವಸ್ಥಾನದಿಂದ ಅನುಗ್ರಹ ಅಪಾರ್ಟ್ಮೆಂಟ್ ಸಮುಚ್ಚಯದವರೆಗೂ ಇಳಿಜಾರು ಪ್ರದೇಶದಲ್ಲಿದೆ. ರಸ್ತೆಯೂ ಕಿರಿದಾಗಿದೆ. ಹಾಗಾಗಿ ಮಳೆನೀರು ಮನೆಗಳಿಗೆ ನುಗ್ಗುತ್ತಿದೆ’ ಎಂದು ಕಾರ್ಯಪಾಲಕ ಎಂಜಿನಿಯರ್ ಅಶೋಕ್ ತಿಳಿಸಿದರು.</p>.<p>‘ಇಲ್ಲಿನ 800 ಮೀಟರ್ ಉದ್ದದ ರಸ್ತೆಯೂ ಮೂರೂವರೆ ಮೀಟರ್ನಷ್ಟು ಇಳಿಜಾರಿನಲ್ಲಿದೆ. ರಸ್ತೆ ಅಗಲ ಕೇವಲ 16 ಅಡಿ. ಇಲ್ಲಿ ರಸ್ತೆ ಮತ್ತು ಚರಂಡಿ ವೀಸ್ತರಣೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>