ಬೆಂಗಳೂರು: ‘ಕೋಲಾರ, ಚಿಕ್ಕಬಳ್ಳಾಪುರ,ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರಜಿಲ್ಲೆಗಳಲ್ಲಿಆಗಸ್ಟ್ 19ಮತ್ತು 20ರಂದು ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.
‘ಉಳಿದಂತೆರಾಜ್ಯದ ಕರಾವಳಿ ಭಾಗದಲ್ಲಿ ನೈರುತ್ಯ ಮಾನ್ಸೂನ್ ಮಾರುತಗಳ ಪ್ರಮಾಣ ಕ್ಷೀಣಿಸಿದ್ದು, ಮಳೆ ಪ್ರಮಾಣ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಆ. 20ರ ವರೆಗೆ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ’ ಎಂದು ಮಾಹಿತಿ ನೀಡಿದರು.
ಭಾನುವಾರ ಧರ್ಮಸ್ಥಳ, ಕೊಪ್ಪಳ, ಶ್ರೀರಂಗಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬೆಂಗಳೂರು ನಗರ 2, ಸುಬ್ರಹ್ಮಣ್ಯ, ಕಾರವಾರ, ಮೂಡಿಗೆರೆ, ಚಿಕ್ಕಬಳ್ಳಾಪುರ, ಗೌರಿಬಿದನೂರಿನಲ್ಲಿ 1 ಸೆಂ.ಮೀ ಮಳೆ ಬಿದ್ದಿದೆ.