‘ವೇಗವಾಗಿ ಹೊರಟಿದ್ದ ನಾಗರಾಜ್, ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರವನ್ನು ಗಮನಿಸಿರಲಿಲ್ಲ. ದ್ವಿಚಕ್ರ ವಾಹನವನ್ನು ಮರಕ್ಕೆ ಗುದ್ದಿಸಿದ್ದರು. ವಾಹನದಿಂದ ಬಿದ್ದ ನಾಗರಾಜ್ ತಲೆಗೆ ತೀವ್ರ ಪೆಟ್ಟಾಗಿ, ರಕ್ತ ಸೋರುತ್ತಿತ್ತು. ಕೆಲವೇ ನಿಮಿಷಗಳಲ್ಲಿ ಪ್ರಜ್ಞೆಯೂ ಹೋಗಿತ್ತು. ಸ್ಥಳೀಯರು ಹಾಗೂ ಸಂಬಂಧಿಕರು ಸ್ಥಳಕ್ಕೆ ಬಂದು, ನಾಗರಾಜ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು’ ಎಂದೂ ಮಾಹಿತಿ ನೀಡಿದರು.