<p>ಬೆಂಗಳೂರು: ನಗರದಲ್ಲಿ ಇನ್ನು ಮುಂದೆ 30X40 ಅಳತೆಯ ನಿವೇಶನಗಳಲ್ಲಿ ಮನೆ ಕಟ್ಟುವವರು ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡುವುದನ್ನು ಕಡ್ಡಾಯಗೊಳಿಸುವ ‘ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮ ಸಾರ ಚರಂಡಿ ವ್ಯವಸ್ಥೆ ಮಸೂದೆ’ 2021 ಕ್ಕೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು.</p>.<p>ಮುಖ್ಯಮಂತ್ರಿಯವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಸೂದೆಯನ್ನು ಮಂಡಿಸಿ, ಈವರೆಗೆ 60X40 ಅಡಿ ವಿಸ್ತೀರ್ಣದ ನಿವೇಶನಗಳಿಗೆ ಮಾತ್ರ ಕಡ್ಡಾಯಗೊಳಿಸಲಾಗಿತ್ತು ಎಂದರು.</p>.<p>ಈಗಾಗಲೇ 30X40 ಅಳತೆಯ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಇದು ಅನ್ವಯವಾಗುವುದಿಲ್ಲ. ಅವರಿಗೆ ವಿನಾಯತಿ ನೀಡಲಾಗುತ್ತದೆ. ಆದರೆ, 60X40 ವಿಸ್ತೀರ್ಣದ ನಿವೇಶನಗಳಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆ ಇಲ್ಲದೆ ಮನೆ ಕಟ್ಟಿಕೊಂಡವರು ಆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ವಿವರಿಸಿದರು.</p>.<p>ಇದರಿಂದ ಅಂತರ್ಜಲ ಮರುಪೂರಣಕ್ಕೆ ಅನುಕೂಲವಾಗುತ್ತದೆ. ಕಾವೇರಿ ನೀರು ಅಥವಾ ಅಂರ್ತಜಲದ ಅತಿಯಾದ ಮೇಲಿನ ಅವಲಂಬನೆಯೂ ಕಡಿಮೆ ಆಗುತ್ತದೆ. ಮಳೆ ನೀರು ಒಳಚರಂಡಿಯಲ್ಲಿ ಹರಿದು ಹೋಗಿ ವ್ಯರ್ಥವಾಗುವುದನ್ನು ತಗ್ಗಿಸಬಹುದು ಮತ್ತು ನಗರ ಪ್ರವಾಹ ತಗ್ಗಿಸಲು ಸಹಾಯಕವಾಗುತ್ತದೆ ಎಂದು ಮಾಧುಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದಲ್ಲಿ ಇನ್ನು ಮುಂದೆ 30X40 ಅಳತೆಯ ನಿವೇಶನಗಳಲ್ಲಿ ಮನೆ ಕಟ್ಟುವವರು ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡುವುದನ್ನು ಕಡ್ಡಾಯಗೊಳಿಸುವ ‘ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮ ಸಾರ ಚರಂಡಿ ವ್ಯವಸ್ಥೆ ಮಸೂದೆ’ 2021 ಕ್ಕೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು.</p>.<p>ಮುಖ್ಯಮಂತ್ರಿಯವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಸೂದೆಯನ್ನು ಮಂಡಿಸಿ, ಈವರೆಗೆ 60X40 ಅಡಿ ವಿಸ್ತೀರ್ಣದ ನಿವೇಶನಗಳಿಗೆ ಮಾತ್ರ ಕಡ್ಡಾಯಗೊಳಿಸಲಾಗಿತ್ತು ಎಂದರು.</p>.<p>ಈಗಾಗಲೇ 30X40 ಅಳತೆಯ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಇದು ಅನ್ವಯವಾಗುವುದಿಲ್ಲ. ಅವರಿಗೆ ವಿನಾಯತಿ ನೀಡಲಾಗುತ್ತದೆ. ಆದರೆ, 60X40 ವಿಸ್ತೀರ್ಣದ ನಿವೇಶನಗಳಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆ ಇಲ್ಲದೆ ಮನೆ ಕಟ್ಟಿಕೊಂಡವರು ಆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ವಿವರಿಸಿದರು.</p>.<p>ಇದರಿಂದ ಅಂತರ್ಜಲ ಮರುಪೂರಣಕ್ಕೆ ಅನುಕೂಲವಾಗುತ್ತದೆ. ಕಾವೇರಿ ನೀರು ಅಥವಾ ಅಂರ್ತಜಲದ ಅತಿಯಾದ ಮೇಲಿನ ಅವಲಂಬನೆಯೂ ಕಡಿಮೆ ಆಗುತ್ತದೆ. ಮಳೆ ನೀರು ಒಳಚರಂಡಿಯಲ್ಲಿ ಹರಿದು ಹೋಗಿ ವ್ಯರ್ಥವಾಗುವುದನ್ನು ತಗ್ಗಿಸಬಹುದು ಮತ್ತು ನಗರ ಪ್ರವಾಹ ತಗ್ಗಿಸಲು ಸಹಾಯಕವಾಗುತ್ತದೆ ಎಂದು ಮಾಧುಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>