<p><strong>ಬೆಂಗಳೂರು</strong>: ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ರೈನ್ಬೋ ಆಸ್ಪತ್ರೆಯು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಾಕಥಾನ್ಗೆ ಸಂಸದ ಪಿ.ಸಿ. ಮೋಹನ್, ನಟಿ ಸಪ್ತಮಿ ಗೌಡ ಮತ್ತು ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಲಾ ಕೃಷ್ಣಮೂರ್ತಿ ಭಾನುವಾರ ಚಾಲನೆ ನೀಡಿದರು.</p>.<p>ನಟಿ ಸಪ್ತಮಿ ಗೌಡ ಮಾತನಾಡಿ, ‘ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಅತ್ಯಂತದ ಕಷ್ಟದ ದಿನಗಳನ್ನು ಎದುರಿಸಬೇಕಾಯಿತು. ಈಗ ಎಲ್ಲ ಕ್ಷೇತ್ರಗಳು ಚೇತರಿಸಿಕೊಂಡಿವೆ. ಮಕ್ಕಳ ಆರೋಗ್ಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ರೇನ್ಬೋ ಆಸ್ಪತ್ರೆ ಮಹತ್ತರ ಪಾತ್ರ ನಿರ್ವಹಿಸುತ್ತಿದೆ’ ಎಂದರು.</p>.<p>ಡಿಸಿಪಿ ಕಲಾ ಕೃಷ್ಣಮೂರ್ತಿ ಮಾತನಾಡಿ, ‘ಪ್ರತಿಯೊಬ್ಬರು ಸದೃಢವಾಗಿರುವುದು ಮುಖ್ಯ. ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಕಥಾನ್ ಆಯೋಜಿಸಲಾಗಿದೆ. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಎಂದರು.</p>.<p>ಕ್ಲಿನಿಕಲ್ ಡೈರೆಕ್ಟರ್ ಡಾ. ಅರವಿಂದ ಶೆಣೈ ಮಾತನಾಡಿ, ‘ಎಲ್ಲರ ಮಾನಸಿಕ ಆರೋಗ್ಯದ ಮೇಲೆ ಕೋವಿಡ್ ಪರಿಣಾಮ ಬೀರಿದೆ. ಮಕ್ಕಳನ್ನು ಅವರ ಹಿಂದಿನ ಜೀವನ ಶೈಲಿಗೆ ತರುವ ಸಮಯ ಇದಾಗಿದೆ. ಈ ವಾಕಥಾನ್ ಮೂಲಕ ಮಕ್ಕಳು ಮತ್ತು ವಯಸ್ಕರ ಜೀವನದಲ್ಲಿ ಬದಲಾವಣೆಯಾಗಬೇಕು. ಆರೋಗ್ಯಕರ ಜೀವನಕ್ಕೆ ಪ್ರತಿದಿನ ಹೆಜ್ಜೆ ಹಾಕಬೇಕು’ ಎಂದು ಸಲಹೆ ನೀಡಿದರು.</p>.<p>ರೈನ್ ಬೋ ಆಸ್ಪತ್ರೆಯ ಉಪಾಧ್ಯಕ್ಷ ಪಿ.ನಿತ್ಯಾನಂದ, ಮಕ್ಕಳ ತೀವ್ರ ನಿಗಾ ಸೇವೆಗಳ ಮುಖ್ಯಸ್ಥ ಡಾ. ರಕ್ಷಯ್ ಶೆಟ್ಟಿ, ಡಾ.ಎಂ.ಎಸ್. ಶ್ರೀಧರ್, ರತೀಫ್ ಕೆ.ಎಂ., ವಿಕ್ರಂ ವಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ರೈನ್ಬೋ ಆಸ್ಪತ್ರೆಯು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಾಕಥಾನ್ಗೆ ಸಂಸದ ಪಿ.ಸಿ. ಮೋಹನ್, ನಟಿ ಸಪ್ತಮಿ ಗೌಡ ಮತ್ತು ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಲಾ ಕೃಷ್ಣಮೂರ್ತಿ ಭಾನುವಾರ ಚಾಲನೆ ನೀಡಿದರು.</p>.<p>ನಟಿ ಸಪ್ತಮಿ ಗೌಡ ಮಾತನಾಡಿ, ‘ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಅತ್ಯಂತದ ಕಷ್ಟದ ದಿನಗಳನ್ನು ಎದುರಿಸಬೇಕಾಯಿತು. ಈಗ ಎಲ್ಲ ಕ್ಷೇತ್ರಗಳು ಚೇತರಿಸಿಕೊಂಡಿವೆ. ಮಕ್ಕಳ ಆರೋಗ್ಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ರೇನ್ಬೋ ಆಸ್ಪತ್ರೆ ಮಹತ್ತರ ಪಾತ್ರ ನಿರ್ವಹಿಸುತ್ತಿದೆ’ ಎಂದರು.</p>.<p>ಡಿಸಿಪಿ ಕಲಾ ಕೃಷ್ಣಮೂರ್ತಿ ಮಾತನಾಡಿ, ‘ಪ್ರತಿಯೊಬ್ಬರು ಸದೃಢವಾಗಿರುವುದು ಮುಖ್ಯ. ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಕಥಾನ್ ಆಯೋಜಿಸಲಾಗಿದೆ. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಎಂದರು.</p>.<p>ಕ್ಲಿನಿಕಲ್ ಡೈರೆಕ್ಟರ್ ಡಾ. ಅರವಿಂದ ಶೆಣೈ ಮಾತನಾಡಿ, ‘ಎಲ್ಲರ ಮಾನಸಿಕ ಆರೋಗ್ಯದ ಮೇಲೆ ಕೋವಿಡ್ ಪರಿಣಾಮ ಬೀರಿದೆ. ಮಕ್ಕಳನ್ನು ಅವರ ಹಿಂದಿನ ಜೀವನ ಶೈಲಿಗೆ ತರುವ ಸಮಯ ಇದಾಗಿದೆ. ಈ ವಾಕಥಾನ್ ಮೂಲಕ ಮಕ್ಕಳು ಮತ್ತು ವಯಸ್ಕರ ಜೀವನದಲ್ಲಿ ಬದಲಾವಣೆಯಾಗಬೇಕು. ಆರೋಗ್ಯಕರ ಜೀವನಕ್ಕೆ ಪ್ರತಿದಿನ ಹೆಜ್ಜೆ ಹಾಕಬೇಕು’ ಎಂದು ಸಲಹೆ ನೀಡಿದರು.</p>.<p>ರೈನ್ ಬೋ ಆಸ್ಪತ್ರೆಯ ಉಪಾಧ್ಯಕ್ಷ ಪಿ.ನಿತ್ಯಾನಂದ, ಮಕ್ಕಳ ತೀವ್ರ ನಿಗಾ ಸೇವೆಗಳ ಮುಖ್ಯಸ್ಥ ಡಾ. ರಕ್ಷಯ್ ಶೆಟ್ಟಿ, ಡಾ.ಎಂ.ಎಸ್. ಶ್ರೀಧರ್, ರತೀಫ್ ಕೆ.ಎಂ., ವಿಕ್ರಂ ವಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>