<p><strong>ಬೆಂಗಳೂರು: </strong>ಜನವರಿಯಲ್ಲಿಯೂ ಜೂನ್ನಲ್ಲಿದ್ದಂತೆ ಮಳೆಯಾಗುತ್ತಿದ್ದು, ಬುಧವಾರವೂ ನಗರದಲ್ಲಿ ವರುಣನ ದರ್ಶನವಾಯಿತು. ಇಡೀ ದಿನ ತಂಪಾದ ವಾತಾವರಣ ಇತ್ತು.</p>.<p>ಮಿಂಚು–ಗುಡುಗುಗಳ ಆರ್ಭಟವಿಲ್ಲದ, ದೊಡ್ಡದಾಗಿ ಹರಿಯುವ ಕೊಳಚೆ ನೀರಿನ ಕಿರಿಕಿರಿಯಿಲ್ಲದ ವಾತಾವರಣವನ್ನು ಜನರು ಆನಂದಿಸಿದರು. ಪೂರ್ತಿ ದಿನ ಮೋಡ ಕವಿದ ವಾತಾವರಣವಿದ್ದು, ಚಳಿಯೂ ಹೆಚ್ಚಾಗಿತ್ತು. ಬೆಳಿಗ್ಗೆಯಿಂದಲೇ ಜಿಟಿಜಿಟಿಯಾಗಿ ಸುರಿದ ಮಳೆ, ಸಂಜೆ ಹೊತ್ತಿಗೆ ಬಿರುಸುಗೊಂಡು ಕೆಲವು ಕಡೆಗಳಲ್ಲಿ ಜೋರಾಗಿ ಸುರಿಯಿತು.</p>.<p>ಬೇರೆ ವಲಯಗಳಿಗೆ ಹೋಲಿಸಿದರೆ, ಬೊಮ್ಮನಹಳ್ಳಿ ಹಾಗೂ ಪಶ್ಚಿಮ ವಲಯದಲ್ಲಿ ಅಧಿಕ ಮಳೆ ಸುರಿಯಿತು. ‘ಬಂಗಾಳಕೊಲ್ಲಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಚುರುಕಾಗಿದೆ’ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.</p>.<p>ಕೆ.ಆರ್. ಮಾರುಕಟ್ಟೆ, ಶಾಂತಿನಗರ, ರಾಜಾಜಿನಗರ, ಯಶವಂತಪುರ, ದೀಪಾಂಜಲಿನಗರ, ಬಸವನಗುಡಿ, ಮಲ್ಲೇಶ್ವರ, ಶೇಷಾದ್ರಿಪುರ, ಆರ್.ಆರ್.ನಗರ, ಹೆಬ್ಬಾಳ, ಬೊಮ್ಮನಹಳ್ಳಿ, ವಿದ್ಯಾರಣ್ಯಪುರ ಸೇರಿದಂತೆ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬಿದ್ದಿದೆ. ನಗರದಲ್ಲಿ ಸರಾಸರಿ 7.34 ಮಿ.ಮೀ. ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಮಾಹಿತಿ ನೀಡಿದೆ.</p>.<p>‘ದಿನವಿಡೀ ಮಳೆ ಸುರಿದರೂ ನಗರದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.</p>.<p class="Subhead"><strong>ಸಂಚಾರ ದಟ್ಟಣೆ:</strong></p>.<p>ಕೆ.ಆರ್. ವೃತ್ತ, ನೃಪತುಂಗ ರಸ್ತೆ, ಮೆಜೆಸ್ಟಿಕ್ ಮತ್ತು ಸುತ್ತಮುತ್ತಲಿನ ರಸ್ತೆಗಳು, ಕೆ.ಆರ್. ಮಾರುಕಟ್ಟೆ, ಹಡ್ಸನ್ ವೃತ್ತ, ರೆಸಿಡೆನ್ಸಿ ರಸ್ತೆ, ಹೆಬ್ಬಾಳ ಜಂಕ್ಷನ್, ಆನಂದರಾವ್ ವೃತ್ತ, ಮೈಸೂರು ರಸ್ತೆ ಸೇರಿದಂತೆ ಮುಖ್ಯ ರಸ್ತೆ ಹಾಗೂ ವೃತ್ತಗಳಲ್ಲಿ ಸಂಜೆಯ ವೇಳೆ ಸ್ವಲ್ಪ ಹೊತ್ತು ದಟ್ಟಣೆ ಉಂಟಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜನವರಿಯಲ್ಲಿಯೂ ಜೂನ್ನಲ್ಲಿದ್ದಂತೆ ಮಳೆಯಾಗುತ್ತಿದ್ದು, ಬುಧವಾರವೂ ನಗರದಲ್ಲಿ ವರುಣನ ದರ್ಶನವಾಯಿತು. ಇಡೀ ದಿನ ತಂಪಾದ ವಾತಾವರಣ ಇತ್ತು.</p>.<p>ಮಿಂಚು–ಗುಡುಗುಗಳ ಆರ್ಭಟವಿಲ್ಲದ, ದೊಡ್ಡದಾಗಿ ಹರಿಯುವ ಕೊಳಚೆ ನೀರಿನ ಕಿರಿಕಿರಿಯಿಲ್ಲದ ವಾತಾವರಣವನ್ನು ಜನರು ಆನಂದಿಸಿದರು. ಪೂರ್ತಿ ದಿನ ಮೋಡ ಕವಿದ ವಾತಾವರಣವಿದ್ದು, ಚಳಿಯೂ ಹೆಚ್ಚಾಗಿತ್ತು. ಬೆಳಿಗ್ಗೆಯಿಂದಲೇ ಜಿಟಿಜಿಟಿಯಾಗಿ ಸುರಿದ ಮಳೆ, ಸಂಜೆ ಹೊತ್ತಿಗೆ ಬಿರುಸುಗೊಂಡು ಕೆಲವು ಕಡೆಗಳಲ್ಲಿ ಜೋರಾಗಿ ಸುರಿಯಿತು.</p>.<p>ಬೇರೆ ವಲಯಗಳಿಗೆ ಹೋಲಿಸಿದರೆ, ಬೊಮ್ಮನಹಳ್ಳಿ ಹಾಗೂ ಪಶ್ಚಿಮ ವಲಯದಲ್ಲಿ ಅಧಿಕ ಮಳೆ ಸುರಿಯಿತು. ‘ಬಂಗಾಳಕೊಲ್ಲಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಚುರುಕಾಗಿದೆ’ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.</p>.<p>ಕೆ.ಆರ್. ಮಾರುಕಟ್ಟೆ, ಶಾಂತಿನಗರ, ರಾಜಾಜಿನಗರ, ಯಶವಂತಪುರ, ದೀಪಾಂಜಲಿನಗರ, ಬಸವನಗುಡಿ, ಮಲ್ಲೇಶ್ವರ, ಶೇಷಾದ್ರಿಪುರ, ಆರ್.ಆರ್.ನಗರ, ಹೆಬ್ಬಾಳ, ಬೊಮ್ಮನಹಳ್ಳಿ, ವಿದ್ಯಾರಣ್ಯಪುರ ಸೇರಿದಂತೆ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬಿದ್ದಿದೆ. ನಗರದಲ್ಲಿ ಸರಾಸರಿ 7.34 ಮಿ.ಮೀ. ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಮಾಹಿತಿ ನೀಡಿದೆ.</p>.<p>‘ದಿನವಿಡೀ ಮಳೆ ಸುರಿದರೂ ನಗರದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ’ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.</p>.<p class="Subhead"><strong>ಸಂಚಾರ ದಟ್ಟಣೆ:</strong></p>.<p>ಕೆ.ಆರ್. ವೃತ್ತ, ನೃಪತುಂಗ ರಸ್ತೆ, ಮೆಜೆಸ್ಟಿಕ್ ಮತ್ತು ಸುತ್ತಮುತ್ತಲಿನ ರಸ್ತೆಗಳು, ಕೆ.ಆರ್. ಮಾರುಕಟ್ಟೆ, ಹಡ್ಸನ್ ವೃತ್ತ, ರೆಸಿಡೆನ್ಸಿ ರಸ್ತೆ, ಹೆಬ್ಬಾಳ ಜಂಕ್ಷನ್, ಆನಂದರಾವ್ ವೃತ್ತ, ಮೈಸೂರು ರಸ್ತೆ ಸೇರಿದಂತೆ ಮುಖ್ಯ ರಸ್ತೆ ಹಾಗೂ ವೃತ್ತಗಳಲ್ಲಿ ಸಂಜೆಯ ವೇಳೆ ಸ್ವಲ್ಪ ಹೊತ್ತು ದಟ್ಟಣೆ ಉಂಟಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>