<p><strong>ಬೆಂಗಳೂರು</strong>: ಮಳೆನೀರು ರಸ್ತೆಯಲ್ಲೇ ನಿಂತಿದ್ದರಿಂದ ತುಮಕೂರು ರಸ್ತೆ ಹಾಗೂ ಹೆಬ್ಬಾಳದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನದಿಂದ ಸಂಜೆಯವರೆಗೂ ಸಂಚಾರ ದಟ್ಟಣೆ ಉಂಟಾಯಿತು.</p>.<p>ತುಮಕೂರು ರಸ್ತೆಯ ಮೇಲ್ಸೇತುವೆ ಮೇಲೆ ನೀರು ನಿಂತು ಹಲವು ಗಂಟೆ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಜಾಲಹಳ್ಳಿ ನಮ್ಮ ಮೆಟ್ರೊ ಸ್ಟೇಷನ್ ಸಮೀಪ ಮೇಲ್ಸೇತುವೆಯಲ್ಲಿ ಒಂದೆರಡು ಅಡಿ ನೀರು ನಿಂತಿತ್ತು.</p>.<p>ಹೆಬ್ಬಾಳ ಜಂಕ್ಷನ್, ಕೆಂಪಾಪುರ, ವೀರಣ್ಣಪಾಳ್ಯ ಜಂಕ್ಷನ್ ಸುತ್ತಮುತ್ತಲ ರಸ್ತೆಗಳಲ್ಲಿ ಮಳೆ ನೀರು ನಿಂತು ಸಂಚಾರ ಅಸ್ತವ್ಯಸ್ತವಾಯಿತು.</p>.<p>ಬಾಗಲಗುಂಟೆಯಲ್ಲಿ 5 ಸೆಂ.ಮೀ, ಚೊಕ್ಕಸಂದ್ರದಲ್ಲಿ 4.3 ಸೆಂ.ಮೀ, ಶೆಟ್ಟಿಹಳ್ಳಿಯಲ್ಲಿ 2.8 ಸೆಂ.ಮೀ, ಪೀಣ್ಯ ಕೈಗಾರಿಕೆ ಪ್ರದೇಶದಲ್ಲಿ 2.7 ಸೆಂ.ಮೀ, ದೊಡ್ಡಬಿದರಕಲ್ಲಿನಲ್ಲಿ 2.4 ಸೆಂ.ಮೀ, ಕೊಡಿಗೆಹಳ್ಳಿ, ನಂದಿನಿ ಲೇಔಟ್ನಲ್ಲಿ ತಲಾ 2.3 ಸೆಂ.ಮೀ, ನಾಗಪುರದಲ್ಲಿ 1.7 ಸೆಂ.ಮೀ, ಹೇರೊಹಳ್ಳಿಯಲ್ಲಿ 1.2 ಸೆಂ.ಮೀ ಹಾಗೂ ರಾಜಾಜಿನಗರದ ಸುತ್ತಮುತ್ತ 1 ಸೆಂ.ಮೀ ಮಳೆಯಾಯಿತು.</p>.<p>ಸದಾಶಿವನಗರ ಪೊಲೀಸ್ ಠಾಣೆ ಸಮೀಪ ಬೃಹತ್ ಮರ ಬಿದ್ದಿದ್ದರಿಂದ ಕಾರು ಜಖಂಗೊಂಡಿತು.</p>.<p>ಕ್ರಮ: ‘ನಗರದಲ್ಲಿ 23 ಸ್ಥಳಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಆ ಸ್ಥಳಗಳನ್ನು ಸ್ವಚ್ಛ ಮಾಡಲಾಗಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಜಲಮಂಡಳಿ, ಬಿಎಂಆರ್ಸಿಎಲ್, ಬಿಡಿಎ ಕಾಮಗಾರಿ ಕೈಗೊಂಡಿರುವ ಸ್ಥಳಗಳಲ್ಲಿ ಮಳೆ ನೀರು ನಿಲ್ಲುತ್ತಿದ್ದು, ನೀರು ಹರಿವಿಗೆ ಸ್ಥಳ ಮಾಡಿಕೊಡಲು ಅವರಿಗೆ ಸೂಚಿಸಲಾಗಿದೆ. ಸೆಪ್ಟೆಂಬರ್ ಅಂತ್ಯದವರೆಗೂ ನಗರದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಳೆನೀರು ರಸ್ತೆಯಲ್ಲೇ ನಿಂತಿದ್ದರಿಂದ ತುಮಕೂರು ರಸ್ತೆ ಹಾಗೂ ಹೆಬ್ಬಾಳದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನದಿಂದ ಸಂಜೆಯವರೆಗೂ ಸಂಚಾರ ದಟ್ಟಣೆ ಉಂಟಾಯಿತು.</p>.<p>ತುಮಕೂರು ರಸ್ತೆಯ ಮೇಲ್ಸೇತುವೆ ಮೇಲೆ ನೀರು ನಿಂತು ಹಲವು ಗಂಟೆ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಜಾಲಹಳ್ಳಿ ನಮ್ಮ ಮೆಟ್ರೊ ಸ್ಟೇಷನ್ ಸಮೀಪ ಮೇಲ್ಸೇತುವೆಯಲ್ಲಿ ಒಂದೆರಡು ಅಡಿ ನೀರು ನಿಂತಿತ್ತು.</p>.<p>ಹೆಬ್ಬಾಳ ಜಂಕ್ಷನ್, ಕೆಂಪಾಪುರ, ವೀರಣ್ಣಪಾಳ್ಯ ಜಂಕ್ಷನ್ ಸುತ್ತಮುತ್ತಲ ರಸ್ತೆಗಳಲ್ಲಿ ಮಳೆ ನೀರು ನಿಂತು ಸಂಚಾರ ಅಸ್ತವ್ಯಸ್ತವಾಯಿತು.</p>.<p>ಬಾಗಲಗುಂಟೆಯಲ್ಲಿ 5 ಸೆಂ.ಮೀ, ಚೊಕ್ಕಸಂದ್ರದಲ್ಲಿ 4.3 ಸೆಂ.ಮೀ, ಶೆಟ್ಟಿಹಳ್ಳಿಯಲ್ಲಿ 2.8 ಸೆಂ.ಮೀ, ಪೀಣ್ಯ ಕೈಗಾರಿಕೆ ಪ್ರದೇಶದಲ್ಲಿ 2.7 ಸೆಂ.ಮೀ, ದೊಡ್ಡಬಿದರಕಲ್ಲಿನಲ್ಲಿ 2.4 ಸೆಂ.ಮೀ, ಕೊಡಿಗೆಹಳ್ಳಿ, ನಂದಿನಿ ಲೇಔಟ್ನಲ್ಲಿ ತಲಾ 2.3 ಸೆಂ.ಮೀ, ನಾಗಪುರದಲ್ಲಿ 1.7 ಸೆಂ.ಮೀ, ಹೇರೊಹಳ್ಳಿಯಲ್ಲಿ 1.2 ಸೆಂ.ಮೀ ಹಾಗೂ ರಾಜಾಜಿನಗರದ ಸುತ್ತಮುತ್ತ 1 ಸೆಂ.ಮೀ ಮಳೆಯಾಯಿತು.</p>.<p>ಸದಾಶಿವನಗರ ಪೊಲೀಸ್ ಠಾಣೆ ಸಮೀಪ ಬೃಹತ್ ಮರ ಬಿದ್ದಿದ್ದರಿಂದ ಕಾರು ಜಖಂಗೊಂಡಿತು.</p>.<p>ಕ್ರಮ: ‘ನಗರದಲ್ಲಿ 23 ಸ್ಥಳಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಆ ಸ್ಥಳಗಳನ್ನು ಸ್ವಚ್ಛ ಮಾಡಲಾಗಿದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಜಲಮಂಡಳಿ, ಬಿಎಂಆರ್ಸಿಎಲ್, ಬಿಡಿಎ ಕಾಮಗಾರಿ ಕೈಗೊಂಡಿರುವ ಸ್ಥಳಗಳಲ್ಲಿ ಮಳೆ ನೀರು ನಿಲ್ಲುತ್ತಿದ್ದು, ನೀರು ಹರಿವಿಗೆ ಸ್ಥಳ ಮಾಡಿಕೊಡಲು ಅವರಿಗೆ ಸೂಚಿಸಲಾಗಿದೆ. ಸೆಪ್ಟೆಂಬರ್ ಅಂತ್ಯದವರೆಗೂ ನಗರದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>