<p><strong>ಬೆಂಗಳೂರು</strong>: ಗೋಕಲ್ ದಾಸ್ ಎಕ್ಸ್ಪೋರ್ಟ್ಸ್ ಫೌಂಡೇಷನ್ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್ಆರ್) ಚಿಕ್ಕ ಬಿದಿರುಕಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಲ್ಲಸಂದ್ರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಲಾಗಿದೆ. </p><p>ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಫೌಂಡೇಷನ್ನ ಸಿಎಸ್ಆರ್ ಉಪಾಧ್ಯಕ್ಷ ಪ್ರಾಂಜಲ್, ‘ಮಳೆ ನೀರು ಸಂಗ್ರಹ ವ್ಯವಸ್ಥೆಯಿಂದ ಸಂಗ್ರಹವಾದ ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿದೆ’ ಎಂದು ಹೇಳಿದರು. </p><p>ಫೌಂಡೇಷನ್ನ ರಾಜೇಂದ್ರ ಪ್ರಸಾದ್, ‘ಮಳೆ ನೀರು ಸಂಗ್ರಹ ವ್ಯವಸ್ಥೆ ಕೇವಲ ನೀರಿನ ಸಂಗ್ರಹಣೆಗೆ ಸಂಬಂಧಿಸಿದ್ದಲ್ಲ, ಅಂತರ್ಜಲವನ್ನು ಮರುಪೂರಣ ಮಾಡಲು ಸಹಕಾರಿಯಾಗಿದೆ. ನೀರಿಗೆ ಸಂಬಂಧಿಸಿದಂತೆ ಬಾಹ್ಯ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲಿದೆ’ ಎಂದರು. ಶಾಲೆಯ ಮುಖ್ಯೋಪಾಧ್ಯಾಯ ರಾಮಲಿಂಗೇಗೌಡ ಅವರು ಈ ವ್ಯವಸ್ಥೆ ಅಳವಡಿಕೆ ಸಂಬಂಧಿಸಿದಂತೆ ಫೌಂಡೇಷನ್ಗೆ ಕೃತಜ್ಞತೆ ಸಲ್ಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೋಕಲ್ ದಾಸ್ ಎಕ್ಸ್ಪೋರ್ಟ್ಸ್ ಫೌಂಡೇಷನ್ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್ಆರ್) ಚಿಕ್ಕ ಬಿದಿರುಕಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಲ್ಲಸಂದ್ರದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಲಾಗಿದೆ. </p><p>ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಫೌಂಡೇಷನ್ನ ಸಿಎಸ್ಆರ್ ಉಪಾಧ್ಯಕ್ಷ ಪ್ರಾಂಜಲ್, ‘ಮಳೆ ನೀರು ಸಂಗ್ರಹ ವ್ಯವಸ್ಥೆಯಿಂದ ಸಂಗ್ರಹವಾದ ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿದೆ’ ಎಂದು ಹೇಳಿದರು. </p><p>ಫೌಂಡೇಷನ್ನ ರಾಜೇಂದ್ರ ಪ್ರಸಾದ್, ‘ಮಳೆ ನೀರು ಸಂಗ್ರಹ ವ್ಯವಸ್ಥೆ ಕೇವಲ ನೀರಿನ ಸಂಗ್ರಹಣೆಗೆ ಸಂಬಂಧಿಸಿದ್ದಲ್ಲ, ಅಂತರ್ಜಲವನ್ನು ಮರುಪೂರಣ ಮಾಡಲು ಸಹಕಾರಿಯಾಗಿದೆ. ನೀರಿಗೆ ಸಂಬಂಧಿಸಿದಂತೆ ಬಾಹ್ಯ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲಿದೆ’ ಎಂದರು. ಶಾಲೆಯ ಮುಖ್ಯೋಪಾಧ್ಯಾಯ ರಾಮಲಿಂಗೇಗೌಡ ಅವರು ಈ ವ್ಯವಸ್ಥೆ ಅಳವಡಿಕೆ ಸಂಬಂಧಿಸಿದಂತೆ ಫೌಂಡೇಷನ್ಗೆ ಕೃತಜ್ಞತೆ ಸಲ್ಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>