ರೈತ ಮುಖಂಡ ಕೆ.ಟಿ.ಗಂಗಾಧರ್ ಮಾತನಾಡಿ, ‘ಬಹುರಾಷ್ಟ್ರೀಯ ಕಂಪನಿಗಳ ಕಣ್ಣುಗಳು ಕೃಷಿ ಕ್ಷೇತ್ರದ ಮೇಲೆಯೂ ಬಿದ್ದಿವೆ. ಹಾಗಾಗಿ ನಾವು ಎಚ್ಚೆತ್ತುಕೊಳ್ಳಬೇಕು. ಸರ್ಕಾರಗಳು ರೈತರ ಶ್ರೇಯೋಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಬೇಕು.
₹ 1ಕ್ಕೆ ಅಕ್ಕಿ ಒದಗಿಸುವ ಅನ್ನಭಾಗ್ಯ, ಊಟ–ತಿಂಡಿ ನೀಡುವ ಇಂದಿರಾ ಕ್ಯಾಂಟೀನ್, ಅಪ್ಪಾಜಿ ಕ್ಯಾಂಟೀನ್ಗಳಂತ ಯೋಜನೆಗಳು ದುಡಿಯುವ ವರ್ಗವನ್ನು ಸೋಮಾರಿ ಮಾಡುತ್ತಿದೆ’ ಎಂದರು.