<p>ಬೆಂಗಳೂರು: ಭೂಸುಧಾರಣಾ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ ಮತ್ತು ಯಾವುದೇ ತಿದ್ದುಪಡಿ ಕಾಯ್ದೆಗಳನ್ನು ತರಾತುರಿಯಲ್ಲಿ ಮಂಡಿಸಿದಂತೆ ಒತ್ತಾಯಿಸಿ ಗುರುವಾರ (ಡಿ.10) ರಾಜಭವನ ಚಲೋ ನಡೆಸಲು ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.</p>.<p>ರೈತರು, ಕಾರ್ಮಿಕರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಯ್ದೆಗಳಿಗೆ ತಿದ್ದುಪಡಿ ತರಲು ಹೊರಟಿವೆ. ಇದನ್ನು ವಿರೋಧಿಸಿ ಗುರುವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಜ್ಯದ ಎಲ್ಲೆಡೆಯಿಂದ ರೈತರು, ಜನಪರ ಸಂಘಟನೆಗಳ ಕಾರ್ಯಕರ್ತರು ಬರಲಿದ್ದಾರೆ ಎಂದು ಸಮಿತಿ ತಿಳಿಸಿದೆ.</p>.<p>ಕಳೆದ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕಾರ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ಜನರ ಮೇಲೆ ಕಾಯ್ದೆಗಳನ್ನು ಹೇರಲು ಸರ್ಕಾರ ಹೊರಟಿತ್ತು. ಈ ಅಧಿವೇಶನದಲ್ಲಿ ಮಸೂದೆಗಳನ್ನು ಮತ್ತೆ ಮಂಡಿಸಿದೆ. ರೈತರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿ, ಮಸೂದೆಗಳನ್ನು ವಾಪಸ್ ಪಡೆಯದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದೂ ಸಮಿತಿ ಎಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಭೂಸುಧಾರಣಾ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ ಮತ್ತು ಯಾವುದೇ ತಿದ್ದುಪಡಿ ಕಾಯ್ದೆಗಳನ್ನು ತರಾತುರಿಯಲ್ಲಿ ಮಂಡಿಸಿದಂತೆ ಒತ್ತಾಯಿಸಿ ಗುರುವಾರ (ಡಿ.10) ರಾಜಭವನ ಚಲೋ ನಡೆಸಲು ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.</p>.<p>ರೈತರು, ಕಾರ್ಮಿಕರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಯ್ದೆಗಳಿಗೆ ತಿದ್ದುಪಡಿ ತರಲು ಹೊರಟಿವೆ. ಇದನ್ನು ವಿರೋಧಿಸಿ ಗುರುವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಜ್ಯದ ಎಲ್ಲೆಡೆಯಿಂದ ರೈತರು, ಜನಪರ ಸಂಘಟನೆಗಳ ಕಾರ್ಯಕರ್ತರು ಬರಲಿದ್ದಾರೆ ಎಂದು ಸಮಿತಿ ತಿಳಿಸಿದೆ.</p>.<p>ಕಳೆದ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕಾರ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ಜನರ ಮೇಲೆ ಕಾಯ್ದೆಗಳನ್ನು ಹೇರಲು ಸರ್ಕಾರ ಹೊರಟಿತ್ತು. ಈ ಅಧಿವೇಶನದಲ್ಲಿ ಮಸೂದೆಗಳನ್ನು ಮತ್ತೆ ಮಂಡಿಸಿದೆ. ರೈತರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿ, ಮಸೂದೆಗಳನ್ನು ವಾಪಸ್ ಪಡೆಯದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದೂ ಸಮಿತಿ ಎಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>