ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯು ತನ್ನ ಹಳೆಯ ವಿದ್ಯಾರ್ಥಿಗಳಿಗೆ ‘ಡಾ ರಾಜ್ ಕುಮಾರ್ ರಸಪ್ರಶ್ನೆ ಸ್ಪರ್ಧೆ’ ಏರ್ಪಡಿಸಿದೆ.
ಲಾಕ್ ಡೌನ್ ಕಾರಣ ಸಾಮಾಜಿಕ ಜಾಲತಾಣದ ಮೂಲಕ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿದೆ. ಲಾಕ್ ಡೌನ್ ಮುಗಿದ ನಂತರ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಗುವುದು ಎಂದು ಸಂಸ್ಥೆಯನಿರ್ದೇಶಕಎಂ. ವೆಂಕಟೇಶ ಶೇಷಾದ್ರಿ ತಿಳಿಸಿದ್ದಾರೆ. ಸಂಪರ್ಕ:ಮೊ–9900158885