<p><strong>ಬೆಂಗಳೂರು: </strong>ರಸ್ತೆಯಲ್ಲಿ ತನ್ನ ಪತ್ನಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಂದಿರುವ ಆರೋಪಿ ಮಂಜುನಾಥ್ ಎಂಬಾತ, ಕೊಲೆ ಬಳಿಕ ರಾಜಗೋಪಾಲನಗರ ಠಾಣೆಗೆ ಬಂದು ಶರಣಾಗಿದ್ದಾನೆ.</p>.<p>ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಮಂಜುನಾಥ್, ತುಮಕೂರು ಜಿಲ್ಲೆಯ ಹೇಮಾ (32) ಎಂಬುವರನ್ನು 10 ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.</p>.<p>‘ದಂಪತಿ ನಡುವೆ ಮಂಗಳವಾರ ರಾತ್ರಿ ಜಗಳ ಶುರುವಾಗಿತ್ತು. ಮಂಜುನಾಥ್, ಮನೆಯಲ್ಲೇ ಪತ್ನಿ ಮೇಲೆ ಹಲ್ಲೆ ಮಾಡಲಾರಂಭಿಸಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಹೇಮಾ, ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಓಡಲಾರಂಭಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಬೆನ್ನಟ್ಟಿದ್ದ ಮಂಜುನಾಥ್, ನಡುರಸ್ತೆಯಲ್ಲೇ ಹೇಮಾ ಅವರಿಗೆ ಚಾಕುವಿನಿಂದ ಇರಿದಿದ್ದ. ತೀವ್ರ ರಕ್ತಸ್ರಾವದಿಂದಾಗಿ ಹೇಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ, ಚಾಕು ಸಮೇತ ಠಾಣೆಗೆ ಬಂದು ಆರೋಪಿ ಶರಣಾಗಿದ್ದಾನೆ. ಕೊಲೆಗೆ ಕಾರಣ ಗೊತ್ತಾಗಿಲ್ಲ’ ಎಂದೂ ತಿಳಿಸಿದರು.</p>.<p class="Subhead">ಪತಿ ವಿರುದ್ಧ ದೂರು ನೀಡಿದ್ದ ಪತ್ನಿ; ‘ಮಂಜುನಾಥ್, ಟೆಂಪೋ ಚಾಲಕನಾಗಿದ್ದ. ಹೇಮಾ, ಗಾರ್ಮೆಂಟ್ಸ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ದಂಪತಿ ನಡುವೆ ಹಲವು ಬಾರಿ ಜಗಳ ಆಗಿತ್ತು. ಪತಿ ವಿರುದ್ಧವೇ ಪತ್ನಿ ಠಾಣೆಗೆ ದೂರು ನೀಡಿದ್ದರು. ಹಿರಿಯರ ಸಂಧಾನದ ಬಳಿಕ ದಂಪತಿ ಒಟ್ಟಿಗೆ ಜೀವನ ನಡೆಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಸ್ತೆಯಲ್ಲಿ ತನ್ನ ಪತ್ನಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಂದಿರುವ ಆರೋಪಿ ಮಂಜುನಾಥ್ ಎಂಬಾತ, ಕೊಲೆ ಬಳಿಕ ರಾಜಗೋಪಾಲನಗರ ಠಾಣೆಗೆ ಬಂದು ಶರಣಾಗಿದ್ದಾನೆ.</p>.<p>ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಮಂಜುನಾಥ್, ತುಮಕೂರು ಜಿಲ್ಲೆಯ ಹೇಮಾ (32) ಎಂಬುವರನ್ನು 10 ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.</p>.<p>‘ದಂಪತಿ ನಡುವೆ ಮಂಗಳವಾರ ರಾತ್ರಿ ಜಗಳ ಶುರುವಾಗಿತ್ತು. ಮಂಜುನಾಥ್, ಮನೆಯಲ್ಲೇ ಪತ್ನಿ ಮೇಲೆ ಹಲ್ಲೆ ಮಾಡಲಾರಂಭಿಸಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಹೇಮಾ, ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಓಡಲಾರಂಭಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಬೆನ್ನಟ್ಟಿದ್ದ ಮಂಜುನಾಥ್, ನಡುರಸ್ತೆಯಲ್ಲೇ ಹೇಮಾ ಅವರಿಗೆ ಚಾಕುವಿನಿಂದ ಇರಿದಿದ್ದ. ತೀವ್ರ ರಕ್ತಸ್ರಾವದಿಂದಾಗಿ ಹೇಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ, ಚಾಕು ಸಮೇತ ಠಾಣೆಗೆ ಬಂದು ಆರೋಪಿ ಶರಣಾಗಿದ್ದಾನೆ. ಕೊಲೆಗೆ ಕಾರಣ ಗೊತ್ತಾಗಿಲ್ಲ’ ಎಂದೂ ತಿಳಿಸಿದರು.</p>.<p class="Subhead">ಪತಿ ವಿರುದ್ಧ ದೂರು ನೀಡಿದ್ದ ಪತ್ನಿ; ‘ಮಂಜುನಾಥ್, ಟೆಂಪೋ ಚಾಲಕನಾಗಿದ್ದ. ಹೇಮಾ, ಗಾರ್ಮೆಂಟ್ಸ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ದಂಪತಿ ನಡುವೆ ಹಲವು ಬಾರಿ ಜಗಳ ಆಗಿತ್ತು. ಪತಿ ವಿರುದ್ಧವೇ ಪತ್ನಿ ಠಾಣೆಗೆ ದೂರು ನೀಡಿದ್ದರು. ಹಿರಿಯರ ಸಂಧಾನದ ಬಳಿಕ ದಂಪತಿ ಒಟ್ಟಿಗೆ ಜೀವನ ನಡೆಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>