<p><strong>ಬೆಂಗಳೂರು</strong>: ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ಒಂದು ತಿಂಗಳಿನಿಂದ ಪೊಲೀಸ್ ಇನ್ಸ್ಪೆಕ್ಟರ್ ಇಲ್ಲವಾಗಿದ್ದು ಕೂಡಲೇ ಆ ಹುದ್ದೆಗೆ ದಕ್ಷ ಅಧಿಕಾರಿಯನ್ನು ನಿಯೋಜಿಸಬೇಕು ಎಂದು ರಾಜಾಜಿನಗರ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.</p><p>ಈ ಕುರಿತು ಮಂಗಳವಾರ ಸರ್ಕಾರಕ್ಕೆ ಬರೆಯಲಾಗಿರುವ ಪತ್ರವನ್ನು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.</p><p>ಅಕ್ಟೋಬರ್ 20 ರಂದು ರಾಜಾಜಿನಗರ ಪೊಲೀಸ್ ಠಾಣೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಆಗ ಕರ್ತವ್ಯದಲ್ಲಿದ್ದ ಇನ್ಸ್ಪೆಕ್ಟರ್ ತಲೆಮರೆಸಿಕೊಂಡಿದ್ದರು. ನಂತರ ನವೆಂಬರ್ 2 ರಂದು ಅವರನ್ನು ಅಮಾನತು ಮಾಡಲಾಗಿತ್ತು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.</p><p>ಸುಮಾರು ಒಂದು ತಿಂಗಳಿನಿಂದ ಬೆಂಗಳೂರಿನ ಪ್ರತಿಷ್ಠಿತ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಇಲ್ಲದಿರುವುದು ಸರಿಯಲ್ಲ. ಈ ಠಾಣೆ ಅನಾಥ ಸ್ಥಿತಿಯಿಂದ ಬಳಲುವುದೂ ಸರಿಯಲ್ಲ. ಕೂಡಲೇ ಸರ್ಕಾರ ಒಬ್ಬ ದಕ್ಷ ಹಾಗೂ ಸೂಕ್ತ ಇನ್ಸ್ಪೆಕ್ಟರ್ ಅನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ಒಂದು ತಿಂಗಳಿನಿಂದ ಪೊಲೀಸ್ ಇನ್ಸ್ಪೆಕ್ಟರ್ ಇಲ್ಲವಾಗಿದ್ದು ಕೂಡಲೇ ಆ ಹುದ್ದೆಗೆ ದಕ್ಷ ಅಧಿಕಾರಿಯನ್ನು ನಿಯೋಜಿಸಬೇಕು ಎಂದು ರಾಜಾಜಿನಗರ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.</p><p>ಈ ಕುರಿತು ಮಂಗಳವಾರ ಸರ್ಕಾರಕ್ಕೆ ಬರೆಯಲಾಗಿರುವ ಪತ್ರವನ್ನು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.</p><p>ಅಕ್ಟೋಬರ್ 20 ರಂದು ರಾಜಾಜಿನಗರ ಪೊಲೀಸ್ ಠಾಣೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಆಗ ಕರ್ತವ್ಯದಲ್ಲಿದ್ದ ಇನ್ಸ್ಪೆಕ್ಟರ್ ತಲೆಮರೆಸಿಕೊಂಡಿದ್ದರು. ನಂತರ ನವೆಂಬರ್ 2 ರಂದು ಅವರನ್ನು ಅಮಾನತು ಮಾಡಲಾಗಿತ್ತು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.</p><p>ಸುಮಾರು ಒಂದು ತಿಂಗಳಿನಿಂದ ಬೆಂಗಳೂರಿನ ಪ್ರತಿಷ್ಠಿತ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಇಲ್ಲದಿರುವುದು ಸರಿಯಲ್ಲ. ಈ ಠಾಣೆ ಅನಾಥ ಸ್ಥಿತಿಯಿಂದ ಬಳಲುವುದೂ ಸರಿಯಲ್ಲ. ಕೂಡಲೇ ಸರ್ಕಾರ ಒಬ್ಬ ದಕ್ಷ ಹಾಗೂ ಸೂಕ್ತ ಇನ್ಸ್ಪೆಕ್ಟರ್ ಅನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>