ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಪ್ರಭಾವಿ ವ್ಯಕ್ತಿಗಳು, ಕಂಪನಿಗಳು, ಬಿಲ್ಡರ್ಗಳು ರಾಜಕಾಲುವೆಗಳನ್ನು ಒತ್ತುವರಿ ಮಾಡಿರುವುದರಿಂದ ನಗರಗಳಲ್ಲಿ ದೊಡ್ಡ ಸಮಸ್ಯೆ ಸೃಷ್ಟಿಯಾಗುತ್ತಿದೆ. ನಗರಗಳಲ್ಲಿ ಮಳೆ ನೀರು ತುಂಬಿಕೊಂಡು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಒತ್ತುವರಿದಾರರು ಎಷ್ಟೇ ಪ್ರಭಾವಿಗಳಾಗಿದ್ದರೂ ಮಣಿಯದೆ ತೆರವು ಮಾಡಲಾಗುವುದು’ ಎಂದರು.