ಮಲ್ಲೇಶ್ವರದಿಂದ ವೈಯಾಲಿಕಾವಲ್, ಗುಟ್ಟಹಳ್ಳಿ ಮತ್ತು ಬಳ್ಳಾರಿ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದು. ದತ್ತಾತ್ರೇಯ ದೇವಸ್ಥಾನದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆಗೆ ಅಡ್ಡಲಾಗಿ ಸೇತುವೆಯೊಂದು ಇತ್ತು. ಹೊಸ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಹಳೇ ಸೇತುವೆಯನ್ನು ಒಡೆದಿರುವ ಬಿಬಿಎಂಪಿ ಅಧಿಕಾರಿಗಳು, ಐದು ತಿಂಗಳಿಂದ ಕಾಮಗಾರಿಯನ್ನೇ ಆರಂಭಿಸಿರಲಿಲ್ಲ.