ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಲೇಖಕ ಕೆ. ರಾಜಕುಮಾರ್ ಹಾಗೂ ಸಂಘ–ಸಂಸ್ಥೆಗಳ ಪ್ರತಿನಿಧಿಯಾಗಿ ಸಾಹಿತಿ ಸಿದ್ರಾಮಪ್ಪ ಮಾಸಿಮಾಡೆ ಅವರನ್ನು ನೇಮಕ ಮಾಡಲಾಗಿದೆ.
ಹಾಲಿ ಗೌರವ ಕಾರ್ಯದರ್ಶಿಯಾಗಿದ್ದ ವ.ಚ. ಚನ್ನೇಗೌಡ ಹಾಗೂ ಸಂಘ–ಸಂಸ್ಥೆಗಳ ಪ್ರತಿನಿಧಿಯಾಗಿದ್ದ ಶೇಖರಗೌಡ ಮಾಲಿ ಪಾಟೀಲ ಅವರು ತಮ್ಮ ಸ್ಥಾನಗಳಿಗೆ ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಈ ನೇಮಕಾತಿ ನಡೆಸಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.