ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆ.ನೀಲಾ ಅವರು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಿರ್ಲಕ್ಷ್ಯಕ್ಕೆ ಒಳಗಾದವರಲ್ಲಿ ಜಾಗೃತಿ ಮೂಡಿಸುವುದು ಕಷ್ಟದ ಕೆಲಸ. ಆದರೆ, ಯಾವುದಕ್ಕೂ ಜಗ್ಗದೆ ನೀಲಾ ಸಾಮಾಜಿಕ ಪರಿವರ್ತನೆ ತರುತ್ತಿದ್ದಾರೆ’ ಎಂದು ಹೇಳಿದರು.