<p><strong>ಯಲಹಂಕ:</strong> ರಾಜಾನುಕುಂಟೆಯಲ್ಲಿರುವ ಬೆಂಗಳೂರು ಹಾಲು ಒಕ್ಕೂಟದ ಶಿಬಿರ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಾರೋಗ್ಯಕ್ಕೆ ತುತ್ತಾದ 35 ಹಾಲು ಉತ್ಪಾದಕ ರೈತರಿಗೆ ಪರಿಹಾರದ ಚೆಕ್ಗಳನ್ನು ವಿತರಿಸಲಾಯಿತು. </p>.<p>ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ಆರೋಗ್ಯ ವೆಚ್ಚದ ₹25 ಸಾವಿರ ಚೆಕ್ಗಳನ್ನು ಒಕ್ಕೂಟದ ನಿರ್ದೇಶಕ ಸತೀಶ್ ಕಡತನಮಲೆ ಅವರು ವಿತರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಹಾಲು ಉತ್ಪಾದಕ ರೈತರು ತಮ್ಮ ಮತ್ತು ರಾಸುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹಾಲು ಉತ್ಪಾದಕರು ಮತ್ತು ರಾಸುಗಳ ಉತ್ತಮ ಆರೋಗ್ಯಕ್ಕೆ ಅಗತ್ಯ ಸಹಕಾರ, ನೆರವು ನೀಡಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಇದೇ ವೇಳೆ ರಾಜಾನುಕುಂಟೆ ಶಿಬಿರ ಕಚೇರಿಯ ವ್ಯವಸ್ಥಾಪಕ ಪ್ರಸನ್ನ ಸೇರಿದಂತೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಹಾಲು ಉತ್ಪಾದಕ ರೈತರು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ರಾಜಾನುಕುಂಟೆಯಲ್ಲಿರುವ ಬೆಂಗಳೂರು ಹಾಲು ಒಕ್ಕೂಟದ ಶಿಬಿರ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಾರೋಗ್ಯಕ್ಕೆ ತುತ್ತಾದ 35 ಹಾಲು ಉತ್ಪಾದಕ ರೈತರಿಗೆ ಪರಿಹಾರದ ಚೆಕ್ಗಳನ್ನು ವಿತರಿಸಲಾಯಿತು. </p>.<p>ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ಆರೋಗ್ಯ ವೆಚ್ಚದ ₹25 ಸಾವಿರ ಚೆಕ್ಗಳನ್ನು ಒಕ್ಕೂಟದ ನಿರ್ದೇಶಕ ಸತೀಶ್ ಕಡತನಮಲೆ ಅವರು ವಿತರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಹಾಲು ಉತ್ಪಾದಕ ರೈತರು ತಮ್ಮ ಮತ್ತು ರಾಸುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹಾಲು ಉತ್ಪಾದಕರು ಮತ್ತು ರಾಸುಗಳ ಉತ್ತಮ ಆರೋಗ್ಯಕ್ಕೆ ಅಗತ್ಯ ಸಹಕಾರ, ನೆರವು ನೀಡಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಇದೇ ವೇಳೆ ರಾಜಾನುಕುಂಟೆ ಶಿಬಿರ ಕಚೇರಿಯ ವ್ಯವಸ್ಥಾಪಕ ಪ್ರಸನ್ನ ಸೇರಿದಂತೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಹಾಲು ಉತ್ಪಾದಕ ರೈತರು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>