<p><strong>ಕೆಂಗೇರಿ</strong>: ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ 15ನೇ ಘಟಿಕೋತ್ಸವದಲ್ಲಿ 400 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, ‘ದಶಕದಿಂದೀಚೆಗೆ<br> ಆರೋಗ್ಯ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ 55 ಕೋಟಿ ನಾಗರಿಕರಿಗೆ ಆರೋಗ್ಯ ಭದ್ರತೆ ಒದಗಿಸಲಾಗಿದೆ’ ಎಂದರು.</p>.<p>‘ಆರೋಗ್ಯ ಕ್ಷೇತ್ರದ ಬಲ ವರ್ಧನೆಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ₹99,000 ಕೋಟಿ ಮೀಸಲಿಡಲಾಗಿದೆ. ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಶೇಕಡ 135ರಷ್ಟು ಹೆಚ್ಚಳ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ವೈದ್ಯಕೀಯ ವೃತ್ತಿ ಎಂಬುದು ಕೇವಲ ಉದ್ಯೋಗವಲ್ಲ. ಅದೊಂದು ಸೇವಾ ಕ್ಷೇತ್ರ. ಯುವ ವೈದ್ಯರು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜದ ಬೆಳವಣಿಗೆಗೆ ಸಹಕಾರ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಆರ್. ಆರ್. ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕುಲಪತಿ ಡಾ. ಎ. ಸಿ.ಷಣ್ಮುಗಂ ಮಾತನಾಡಿ, ‘ಪದವಿ ಗಳಿಕೆಗಾಗಿ ಮಾತ್ರ ಅಧ್ಯಯನ ಮಾಡಬಾರದು. ದೀರ್ಘಕಾಲದವರೆಗೆ ಯಶಸ್ಸನ್ನು ಕಾಪಿಟ್ಟುಕೊಳ್ಳುವ ನಿಟ್ಟಿನಲ್ಲಿ ನಿರಂತರ ಅಧ್ಯಯನ ಅತಿ ಅವಶ್ಯಕ’ ಎಂದರು.</p>.<p>ಆರ್. ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ. ಸಿ. ಎಸ್. ಅರುಣ್ ಕುಮಾರ್, ಟ್ರಸ್ಟಿ ಲಲಿತಾ ಲಕ್ಷ್ಮಿ, ಡಾ. ಎಸ್. ವಿಜಯಾನಂದ, ಸಿ. ಎನ್. ಸೀತಾರಾಮ್, ಡಾ. ಬಸವರಾಜ್ ಭಂಡಾರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ 15ನೇ ಘಟಿಕೋತ್ಸವದಲ್ಲಿ 400 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, ‘ದಶಕದಿಂದೀಚೆಗೆ<br> ಆರೋಗ್ಯ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ 55 ಕೋಟಿ ನಾಗರಿಕರಿಗೆ ಆರೋಗ್ಯ ಭದ್ರತೆ ಒದಗಿಸಲಾಗಿದೆ’ ಎಂದರು.</p>.<p>‘ಆರೋಗ್ಯ ಕ್ಷೇತ್ರದ ಬಲ ವರ್ಧನೆಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ₹99,000 ಕೋಟಿ ಮೀಸಲಿಡಲಾಗಿದೆ. ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಶೇಕಡ 135ರಷ್ಟು ಹೆಚ್ಚಳ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ವೈದ್ಯಕೀಯ ವೃತ್ತಿ ಎಂಬುದು ಕೇವಲ ಉದ್ಯೋಗವಲ್ಲ. ಅದೊಂದು ಸೇವಾ ಕ್ಷೇತ್ರ. ಯುವ ವೈದ್ಯರು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜದ ಬೆಳವಣಿಗೆಗೆ ಸಹಕಾರ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಆರ್. ಆರ್. ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕುಲಪತಿ ಡಾ. ಎ. ಸಿ.ಷಣ್ಮುಗಂ ಮಾತನಾಡಿ, ‘ಪದವಿ ಗಳಿಕೆಗಾಗಿ ಮಾತ್ರ ಅಧ್ಯಯನ ಮಾಡಬಾರದು. ದೀರ್ಘಕಾಲದವರೆಗೆ ಯಶಸ್ಸನ್ನು ಕಾಪಿಟ್ಟುಕೊಳ್ಳುವ ನಿಟ್ಟಿನಲ್ಲಿ ನಿರಂತರ ಅಧ್ಯಯನ ಅತಿ ಅವಶ್ಯಕ’ ಎಂದರು.</p>.<p>ಆರ್. ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ. ಸಿ. ಎಸ್. ಅರುಣ್ ಕುಮಾರ್, ಟ್ರಸ್ಟಿ ಲಲಿತಾ ಲಕ್ಷ್ಮಿ, ಡಾ. ಎಸ್. ವಿಜಯಾನಂದ, ಸಿ. ಎನ್. ಸೀತಾರಾಮ್, ಡಾ. ಬಸವರಾಜ್ ಭಂಡಾರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>