<p><strong>ಬೆಂಗಳೂರು:</strong> ‘ನ.3ರಂದು ನಡೆಯಲಿರುವ ರಾಜರಾಜೇಶ್ವರಿನಗರ ಉಪಚುನಾವಣೆಯಲ್ಲಿ ಕೋವಿಡ್ ಸೋಂಕಿತರು ಪಿಪಿಇ ಕಿಟ್ ಧರಿಸಿ ಮತಗಟ್ಟೆಗೆ ಬರಲು ವಿಶೇಷ ವವಸ್ಥೆ ಮಾಡಲಾಗಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್. ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>‘ಈ ಕ್ಷೇತ್ರದಲ್ಲಿ 1,177 ಕೋವಿಡ್ ಸೋಂಕಿತರಿದ್ದಾರೆ ಎಂದು ಗುರುತಿಸಲಾಗಿದೆ. ಅವರಿಗೆ ಕಂಟ್ರೋಲ್ ರೂಂ ಸಿಬ್ಬಂದಿ ಕರೆ ಮಾಡಿ ಮತದಾನ ಮಾಡಲು ಇಚ್ಛೆ ಇದ್ದರೆ ಕರೆ ತರಲು ಆಂಬುಲೆನ್ಸ್ ಕಳುಹಿಸಲಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ವಿವರಿಸಿದರು.</p>.<p>‘ಚುನಾವಣಾ ಆಯೋಗದ ನಿರ್ದೇಶನದಂತೆ ಸಂಜೆ 5ರಿಂದ 6 ಗಂಟೆ ತನಕ ಕೋವಿಡ್ ಸೋಂಕಿತರಿಗೆ ಅವಕಾಶ ಕಲ್ಪಿಸಲಾಗುವುದು. ಪಿಪಿಇ ಕಿಟ್ಗಳನ್ನು ಕೊಟ್ಟು ಕರೆ ತರಲಾಗುವುದು. ಮತದಾನ ಮುಗಿದ ಬಳಿಕ ಮತ್ತೆ ಮನೆಗೆ ಬಿಡಲಾಗುತ್ತದೆ. ಈ ಒಂದು ಗಂಟೆಯ ಅವಧಿ ಸೋಂಕಿತರಿಗೆ ಮಾತ್ರ ಸೀಮಿತವಲ್ಲ. ಬೇರೆಯವರಿಗೂ ಮತದಾನ ಮಾಡಲು ಅವಕಾಶ ಇದೆ. ಮತಗಟ್ಟೆಯನ್ನು ಸ್ಯಾನಿಟೈಸ್ ಮಾಡಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.</p>.<p>‘ಸೋಂಕಿನ ಲಕ್ಷಣ ಇರುವವರನ್ನೂ ಪ್ರತ್ಯೇಕವಾಗಿ ಮತಗಟ್ಟೆಗೆ ಕರೆ ತರಲಾಗುವುದು. ಈ ಕ್ಷೇತ್ರದಲ್ಲಿ ಒಂಬತ್ತು ವಾರ್ಡ್ಗಳಿದ್ದು, ಪ್ರತಿ ವಾರ್ಡ್ಗೆ ತಲಾ 10ರಂತೆ 90 ಆಂಬುಲೆನ್ಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನ.3ರಂದು ನಡೆಯಲಿರುವ ರಾಜರಾಜೇಶ್ವರಿನಗರ ಉಪಚುನಾವಣೆಯಲ್ಲಿ ಕೋವಿಡ್ ಸೋಂಕಿತರು ಪಿಪಿಇ ಕಿಟ್ ಧರಿಸಿ ಮತಗಟ್ಟೆಗೆ ಬರಲು ವಿಶೇಷ ವವಸ್ಥೆ ಮಾಡಲಾಗಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್. ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>‘ಈ ಕ್ಷೇತ್ರದಲ್ಲಿ 1,177 ಕೋವಿಡ್ ಸೋಂಕಿತರಿದ್ದಾರೆ ಎಂದು ಗುರುತಿಸಲಾಗಿದೆ. ಅವರಿಗೆ ಕಂಟ್ರೋಲ್ ರೂಂ ಸಿಬ್ಬಂದಿ ಕರೆ ಮಾಡಿ ಮತದಾನ ಮಾಡಲು ಇಚ್ಛೆ ಇದ್ದರೆ ಕರೆ ತರಲು ಆಂಬುಲೆನ್ಸ್ ಕಳುಹಿಸಲಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ವಿವರಿಸಿದರು.</p>.<p>‘ಚುನಾವಣಾ ಆಯೋಗದ ನಿರ್ದೇಶನದಂತೆ ಸಂಜೆ 5ರಿಂದ 6 ಗಂಟೆ ತನಕ ಕೋವಿಡ್ ಸೋಂಕಿತರಿಗೆ ಅವಕಾಶ ಕಲ್ಪಿಸಲಾಗುವುದು. ಪಿಪಿಇ ಕಿಟ್ಗಳನ್ನು ಕೊಟ್ಟು ಕರೆ ತರಲಾಗುವುದು. ಮತದಾನ ಮುಗಿದ ಬಳಿಕ ಮತ್ತೆ ಮನೆಗೆ ಬಿಡಲಾಗುತ್ತದೆ. ಈ ಒಂದು ಗಂಟೆಯ ಅವಧಿ ಸೋಂಕಿತರಿಗೆ ಮಾತ್ರ ಸೀಮಿತವಲ್ಲ. ಬೇರೆಯವರಿಗೂ ಮತದಾನ ಮಾಡಲು ಅವಕಾಶ ಇದೆ. ಮತಗಟ್ಟೆಯನ್ನು ಸ್ಯಾನಿಟೈಸ್ ಮಾಡಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.</p>.<p>‘ಸೋಂಕಿನ ಲಕ್ಷಣ ಇರುವವರನ್ನೂ ಪ್ರತ್ಯೇಕವಾಗಿ ಮತಗಟ್ಟೆಗೆ ಕರೆ ತರಲಾಗುವುದು. ಈ ಕ್ಷೇತ್ರದಲ್ಲಿ ಒಂಬತ್ತು ವಾರ್ಡ್ಗಳಿದ್ದು, ಪ್ರತಿ ವಾರ್ಡ್ಗೆ ತಲಾ 10ರಂತೆ 90 ಆಂಬುಲೆನ್ಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>