ಸಂಸದ ಡಿ.ಕೆ.ಸುರೇಶ್ ಮಾತನಾಡಿ, ‘ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ಅಂಟಿರುವ ಕಳಂಕವನ್ನು ತೊಳೆಯಲು ವೇಲು ನಾಯಕರ್, ಜಿ.ಮೋಹನಕುಮಾರ್, ಸಿದ್ದೇಗೌಡ, ಶ್ರೀನಿವಾಸ ಮೂರ್ತಿ ಮತ್ತು ಬಿಜೆಪಿ ಕಾರ್ಯಕರ್ತರು ಬಂದಿದ್ದಾರೆ. ಮೂಲ ವಲಸಿಗರು ಎನ್ನದೇ ಎಲ್ಲರೂ ಒಂದಾಗಿ ಕಾಂಗ್ರೆಸ್ ಅನ್ನು ಸಂಘಟನೆ ಮಾಡಿ ಸರ್ಕಾರದ ಯೋಜನೆಗಳನ್ನು ಬಡವರು, ಜನ ಸಾಮಾನ್ಯರಿಗೆ ತಲುಪಿಸಬೇಕಾಗಿದೆ’ ಎಂದು ಹೇಳಿದರು.