ಬಿಬಿಎಂಪಿ ಆಯುಕ್ತರು, ಕಂದಾಯ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ‘ಬಿಬಿಎಂಪಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಒಂದು ವೇಳೆ ನಿಯಮಾವಳಿ ಉಲ್ಲಂಘಿಸಿದ್ದರೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಆದೇಶಿಸಿತು. ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಲಾಗಿದೆ.