<p><strong>ಬೆಂಗಳೂರು</strong>: ಮುಂದಿನ ಪೀಳಿಗೆಯ ಏರೋ ಎಂಜಿನ್ (ವಿಮಾನದ ಎಂಜಿನ್) ಅಭಿವೃದ್ಧಿಗೆ ವಿಜ್ಞಾನಿಗಳು ಒತ್ತು ನೀಡಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.</p>.<p>ಡಿಆರ್ಡಿಒದ ಗ್ಯಾಸ್ ಟರ್ಬೈನ್ ಸಂಶೋಧನಾ ಸಂಸ್ಥೆಗೆ (ಜಿಟಿಆರ್ಇ) ಭೇಟಿ ನೀಡಿ, ದೇಶೀಯ ಮಿಲಿಟರಿ ಅನಿಲ ಟರ್ಬೈನ್ ಎಂಜಿನ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಯೋಜನೆಗಳ ಸ್ಥಿತಿಗತಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ಐದನೇ ಪೀಳಿಗೆಯ ಏರೋ ಎಂಜಿನ್ನಲ್ಲಿದ್ದೇವೆ. ಇದು ಸಾಕಾಗಲ್ಲ. ಆರನೇ ಪೀಳಿಗೆಗೆ ಬೇಕಾದ ಸುಧಾರಿತ ತಂತ್ರಜ್ಞಾನಗಳ ಅಭಿವೃದ್ಧಿಯನ್ನು ಸಾಧ್ಯವಾದಷ್ಟು ಬೇಗ ಆರಂಭಿಸಬೇಕು. ಕೃತಕ ಬುದ್ಧಿಮತ್ತೆ ಮತ್ತು ಹೊಸ ತಂತ್ರಜ್ಞಾನ ಬಳಕೆ ಹೆಚ್ಚುತ್ತಿದೆ. ಅದಕ್ಕೆ ಪೂರಕವಾಗಿ ಸಂಶೋಧನೆಗಳು ನಡೆಯಬೇಕು ಎಂದು ಹೇಳಿದರು.</p>.<p>‘ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಕೂಡ ಇಂತಹ ಎಂಜಿನ್ಗಳನ್ನು ತಯಾರಿಸಲು 25 ರಿಂದ 30 ವರ್ಷ ತೆಗೆದುಕೊಳ್ಳುತ್ತವೆ. ಭಾರತವು ಈ ಸಮಯವನ್ನು ಕಡಿಮೆ ಮಾಡಿಕೊಳ್ಳಬೇಕು. ಈಗಾಗಲೇ 20 ವರ್ಷಗಳು ಮುಗಿದಿವೆ. ಇನ್ನು ಆರೇಳು ವರ್ಷಗಳ ಒಳಗೆ ನಾವು ಗುರಿ ತಲುಪಬೇಕು’ ಎಂದು ತಿಳಿಸಿದರು.</p>.<p>ಬದಲಾಗುತ್ತಿರುವ ಭೌಗೋಳಿಕ, ರಾಜಕೀಯ ಪರಿಸ್ಥಿತಿಯಲ್ಲಿ ಏರೋ ಎಂಜಿನ್ ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಸಾಧಿಸುವುದು ಅಗತ್ಯ. ಈಗಿನ ಸಂದರ್ಭದಲ್ಲಿ ನಿರ್ಣಾಯಕವಾದ ತಂತ್ರಜ್ಞಾನ ಹೊಂದಿರುವ ರಾಷ್ಟ್ರಗಳು ಮಾತ್ರ ಸುರಕ್ಷಿತವಾಗಿರಲು ಸಾಧ್ಯ ಎಂದು ಪ್ರತಿಪಾದಿಸಿದರು.</p>.<p>18 ವರ್ಷಗಳಿಂದ ಬಾಕಿ ಇದ್ದ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಈಗ ಪೂರ್ಣಗೊಂಡಿದೆ. ಬ್ರಿಟನ್ ಜೊತೆಗಿನ ಜಂಟಿ ಅಧ್ಯಯನ ಮತ್ತು ಫ್ರಾನ್ಸ್ನೊಂದಿಗೆ ರಾಷ್ಟ್ರೀಯ ಏರೋ ಎಂಜಿನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಮಾತುಕತೆಗಳು ಭಾರತಕ್ಕೆ ಪೂರಕವಾಗಿವೆ. ಈ ಸಹಯೋಗಗಳು ಹೊಸ ತಂತ್ರಜ್ಞಾನಗಳನ್ನು ಕಲಿಯಲು ಮತ್ತು ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಸಹಕಾರಿಯಾಗಲಿವೆ ಎಂದರು.</p>.<p>ಪಹಲ್ಗಾಮ್ನಲ್ಲಿ ಪ್ರವಾಸಿಗರ ಹತ್ಯೆಗೆ ಪ್ರತೀಕಾರವಾಗಿ ನಡೆದ ‘ಆಪರೇಷನ್ ಸಿಂಧೂರ್’ದಲ್ಲಿ ಬಳಕೆಯಾದ ಸಂವಹನ ವ್ಯವಸ್ಥೆಯಿಂದ ಹಿಡಿದು ಶಸ್ತ್ರಾಸ್ತ್ರಗಳವರೆಗೆ ಎಲ್ಲವೂ ಸ್ವದೇಶಿ ನಿರ್ಮಿತವಾಗಿದ್ದು, ಇದು ಸೈನಿಕರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದರು.</p>.<p>ರಕ್ಷಣಾ ಇಲಾಖೆಯ ಕಾರ್ಯದರ್ಶಿ, ಆರ್ ಆ್ಯಂಡ್ ಡಿ ಮತ್ತು ಡಿಆರ್ಡಿಒ ಅಧ್ಯಕ್ಷ ಸಮೀರ್ ವಿ. ಕಾಮತ್, ಜಿಟಿಆರ್ಇಯ ಹಿರಿಯ ವಿಜ್ಞಾನಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಂದಿನ ಪೀಳಿಗೆಯ ಏರೋ ಎಂಜಿನ್ (ವಿಮಾನದ ಎಂಜಿನ್) ಅಭಿವೃದ್ಧಿಗೆ ವಿಜ್ಞಾನಿಗಳು ಒತ್ತು ನೀಡಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.</p>.<p>ಡಿಆರ್ಡಿಒದ ಗ್ಯಾಸ್ ಟರ್ಬೈನ್ ಸಂಶೋಧನಾ ಸಂಸ್ಥೆಗೆ (ಜಿಟಿಆರ್ಇ) ಭೇಟಿ ನೀಡಿ, ದೇಶೀಯ ಮಿಲಿಟರಿ ಅನಿಲ ಟರ್ಬೈನ್ ಎಂಜಿನ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಯೋಜನೆಗಳ ಸ್ಥಿತಿಗತಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ಐದನೇ ಪೀಳಿಗೆಯ ಏರೋ ಎಂಜಿನ್ನಲ್ಲಿದ್ದೇವೆ. ಇದು ಸಾಕಾಗಲ್ಲ. ಆರನೇ ಪೀಳಿಗೆಗೆ ಬೇಕಾದ ಸುಧಾರಿತ ತಂತ್ರಜ್ಞಾನಗಳ ಅಭಿವೃದ್ಧಿಯನ್ನು ಸಾಧ್ಯವಾದಷ್ಟು ಬೇಗ ಆರಂಭಿಸಬೇಕು. ಕೃತಕ ಬುದ್ಧಿಮತ್ತೆ ಮತ್ತು ಹೊಸ ತಂತ್ರಜ್ಞಾನ ಬಳಕೆ ಹೆಚ್ಚುತ್ತಿದೆ. ಅದಕ್ಕೆ ಪೂರಕವಾಗಿ ಸಂಶೋಧನೆಗಳು ನಡೆಯಬೇಕು ಎಂದು ಹೇಳಿದರು.</p>.<p>‘ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಕೂಡ ಇಂತಹ ಎಂಜಿನ್ಗಳನ್ನು ತಯಾರಿಸಲು 25 ರಿಂದ 30 ವರ್ಷ ತೆಗೆದುಕೊಳ್ಳುತ್ತವೆ. ಭಾರತವು ಈ ಸಮಯವನ್ನು ಕಡಿಮೆ ಮಾಡಿಕೊಳ್ಳಬೇಕು. ಈಗಾಗಲೇ 20 ವರ್ಷಗಳು ಮುಗಿದಿವೆ. ಇನ್ನು ಆರೇಳು ವರ್ಷಗಳ ಒಳಗೆ ನಾವು ಗುರಿ ತಲುಪಬೇಕು’ ಎಂದು ತಿಳಿಸಿದರು.</p>.<p>ಬದಲಾಗುತ್ತಿರುವ ಭೌಗೋಳಿಕ, ರಾಜಕೀಯ ಪರಿಸ್ಥಿತಿಯಲ್ಲಿ ಏರೋ ಎಂಜಿನ್ ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಸಾಧಿಸುವುದು ಅಗತ್ಯ. ಈಗಿನ ಸಂದರ್ಭದಲ್ಲಿ ನಿರ್ಣಾಯಕವಾದ ತಂತ್ರಜ್ಞಾನ ಹೊಂದಿರುವ ರಾಷ್ಟ್ರಗಳು ಮಾತ್ರ ಸುರಕ್ಷಿತವಾಗಿರಲು ಸಾಧ್ಯ ಎಂದು ಪ್ರತಿಪಾದಿಸಿದರು.</p>.<p>18 ವರ್ಷಗಳಿಂದ ಬಾಕಿ ಇದ್ದ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಈಗ ಪೂರ್ಣಗೊಂಡಿದೆ. ಬ್ರಿಟನ್ ಜೊತೆಗಿನ ಜಂಟಿ ಅಧ್ಯಯನ ಮತ್ತು ಫ್ರಾನ್ಸ್ನೊಂದಿಗೆ ರಾಷ್ಟ್ರೀಯ ಏರೋ ಎಂಜಿನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಮಾತುಕತೆಗಳು ಭಾರತಕ್ಕೆ ಪೂರಕವಾಗಿವೆ. ಈ ಸಹಯೋಗಗಳು ಹೊಸ ತಂತ್ರಜ್ಞಾನಗಳನ್ನು ಕಲಿಯಲು ಮತ್ತು ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಸಹಕಾರಿಯಾಗಲಿವೆ ಎಂದರು.</p>.<p>ಪಹಲ್ಗಾಮ್ನಲ್ಲಿ ಪ್ರವಾಸಿಗರ ಹತ್ಯೆಗೆ ಪ್ರತೀಕಾರವಾಗಿ ನಡೆದ ‘ಆಪರೇಷನ್ ಸಿಂಧೂರ್’ದಲ್ಲಿ ಬಳಕೆಯಾದ ಸಂವಹನ ವ್ಯವಸ್ಥೆಯಿಂದ ಹಿಡಿದು ಶಸ್ತ್ರಾಸ್ತ್ರಗಳವರೆಗೆ ಎಲ್ಲವೂ ಸ್ವದೇಶಿ ನಿರ್ಮಿತವಾಗಿದ್ದು, ಇದು ಸೈನಿಕರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದರು.</p>.<p>ರಕ್ಷಣಾ ಇಲಾಖೆಯ ಕಾರ್ಯದರ್ಶಿ, ಆರ್ ಆ್ಯಂಡ್ ಡಿ ಮತ್ತು ಡಿಆರ್ಡಿಒ ಅಧ್ಯಕ್ಷ ಸಮೀರ್ ವಿ. ಕಾಮತ್, ಜಿಟಿಆರ್ಇಯ ಹಿರಿಯ ವಿಜ್ಞಾನಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>