ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ: ನಾರಾಯಣ್‌ ಅವಿರೋಧ ಆಯ್ಕೆ ಖಚಿತ

Last Updated 18 ನವೆಂಬರ್ 2020, 20:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ. ನಾರಾಯಣ್ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

ಅಶೋಕ್‌ ಗಸ್ತಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾರಾಯಣ್‌ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಬುಧವಾರ ಕೊನೆಯ ದಿನವಾಗಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ನಾರಾಯಣ್, ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣಗೌಡ, ಶಾಸಕ ಸುನಿಲ್‌ ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT