<p><strong>ಪೀಣ್ಯ ದಾಸರಹಳ್ಳಿ:‘</strong>ಕರುನಾಡಲ್ಲಿ ಅರಣ್ಯ ಸಂಪತ್ತು, ಖನಿಜ ಸಂಪತ್ತು, ನದಿಗಳು, ಕಣಿವೆಗಳು, ಬೆಟ್ಟಗುಡ್ಡಗಳು ಸಮೃದ್ಧಿಯಿಂದ ಇದ್ದು, ನಾಡಿನ ಸೊಬಗನ್ನು ಹೆಚ್ಚಿಸಿವೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.</p>.<p>ಹಾವನೂರು ಬಡಾವಣೆಯ ಅಸೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ 70ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ 'ಅಸೆಂಟ್ ಕನ್ನಡ ಕಲರವ -2025' ಎಂಬ ಶೀರ್ಷಿಕೆಯಡಿ ಎರಡು ದಿನಗಳ ಕರ್ನಾಟಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ದಾರ್ಶನಿಕರ, ಸಾಹಿತಿಗಳ, ಚಿಂತಕರ ಮತ್ತು ವಿಜ್ಞಾನಿಗಳನ್ನು ಕಂಡ ಈ ಭೂಮಿ ಪುಣ್ಯಭೂಮಿ ಎಂದು ಬಣ್ಣಿಸಿದರು.</p>.<p>ಕಾಲೇಜಿನಿಂದ ಪ್ರಾರಂಭವಾದ ಮೆರವಣಿಗೆ ಡೊಳ್ಳು ಕುಣಿತ, ವೀರಗಾಸೆ, ಪೂಜಾ ಕುಣಿತ, ನೂರಾರು ವಿದ್ಯಾರ್ಥಿನಿಯರು ಕಳಸ ಹೊತ್ತು ಹೆಸರಘಟ್ಟ ಮುಖ್ಯ ರಸ್ತೆಯಿಂದ ಬಾಗಲಗುಂಟೆಯ ಆಟದ ಮೈದಾನ, ಮಾರಮ್ಮನ ದೇವಸ್ಥಾನ, ಹಾವನೂರು ಬಡಾವಣೆಯ ಮುಖ್ಯ ರಸ್ತೆಯಲ್ಲಿ ಸಾಗಿ ಜಾಗೃತಿ ಮೂಡಿಸಿದರು.</p>.<p>ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. </p>.<p>ವೇದಿಕೆ ಕಾರ್ಯಕ್ರಮದಲ್ಲಿ ಸಾಹಿತಿ ಕಾಳೇಗೌಡ ನಾಗವಾರ ಮಾತನಾಡಿದರು. ಪ್ರಾಂಶುಪಾಲ ಬಿ.ಎಂ. ವೆಂಕಟೇಶ್, ಚಿತ್ರನಟ ಹೊನ್ನವಳ್ಳಿ ಕೃಷ್ಣ, ಕಿರುತೆರೆ ನಟ ಪುನೀತ ಗೌಡ, ಪ್ರಾಧ್ಯಾಪಕರಾದ ಜಯಶಂಕರ ಹಲಗೂರು, ಶ್ವೇತಾ ವೆಂಕಟೇಶ್, ರಾಘವೇಂದ್ರ ಮಸ್ಕಲ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:‘</strong>ಕರುನಾಡಲ್ಲಿ ಅರಣ್ಯ ಸಂಪತ್ತು, ಖನಿಜ ಸಂಪತ್ತು, ನದಿಗಳು, ಕಣಿವೆಗಳು, ಬೆಟ್ಟಗುಡ್ಡಗಳು ಸಮೃದ್ಧಿಯಿಂದ ಇದ್ದು, ನಾಡಿನ ಸೊಬಗನ್ನು ಹೆಚ್ಚಿಸಿವೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.</p>.<p>ಹಾವನೂರು ಬಡಾವಣೆಯ ಅಸೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ 70ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ 'ಅಸೆಂಟ್ ಕನ್ನಡ ಕಲರವ -2025' ಎಂಬ ಶೀರ್ಷಿಕೆಯಡಿ ಎರಡು ದಿನಗಳ ಕರ್ನಾಟಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ದಾರ್ಶನಿಕರ, ಸಾಹಿತಿಗಳ, ಚಿಂತಕರ ಮತ್ತು ವಿಜ್ಞಾನಿಗಳನ್ನು ಕಂಡ ಈ ಭೂಮಿ ಪುಣ್ಯಭೂಮಿ ಎಂದು ಬಣ್ಣಿಸಿದರು.</p>.<p>ಕಾಲೇಜಿನಿಂದ ಪ್ರಾರಂಭವಾದ ಮೆರವಣಿಗೆ ಡೊಳ್ಳು ಕುಣಿತ, ವೀರಗಾಸೆ, ಪೂಜಾ ಕುಣಿತ, ನೂರಾರು ವಿದ್ಯಾರ್ಥಿನಿಯರು ಕಳಸ ಹೊತ್ತು ಹೆಸರಘಟ್ಟ ಮುಖ್ಯ ರಸ್ತೆಯಿಂದ ಬಾಗಲಗುಂಟೆಯ ಆಟದ ಮೈದಾನ, ಮಾರಮ್ಮನ ದೇವಸ್ಥಾನ, ಹಾವನೂರು ಬಡಾವಣೆಯ ಮುಖ್ಯ ರಸ್ತೆಯಲ್ಲಿ ಸಾಗಿ ಜಾಗೃತಿ ಮೂಡಿಸಿದರು.</p>.<p>ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. </p>.<p>ವೇದಿಕೆ ಕಾರ್ಯಕ್ರಮದಲ್ಲಿ ಸಾಹಿತಿ ಕಾಳೇಗೌಡ ನಾಗವಾರ ಮಾತನಾಡಿದರು. ಪ್ರಾಂಶುಪಾಲ ಬಿ.ಎಂ. ವೆಂಕಟೇಶ್, ಚಿತ್ರನಟ ಹೊನ್ನವಳ್ಳಿ ಕೃಷ್ಣ, ಕಿರುತೆರೆ ನಟ ಪುನೀತ ಗೌಡ, ಪ್ರಾಧ್ಯಾಪಕರಾದ ಜಯಶಂಕರ ಹಲಗೂರು, ಶ್ವೇತಾ ವೆಂಕಟೇಶ್, ರಾಘವೇಂದ್ರ ಮಸ್ಕಲ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>