ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,`ಅಯೋಧ್ಯೆಯಲ್ಲಿ ಹಿಂದೂ ದೇವಾಲಯವಿರುವ ಬಗ್ಗೆ ಅನೇಕ ಕುರುಹುಗಳು ದೊರೆತಿವೆ. ಅದೇ ರೀತಿ, ಭಾರತೀಯ ಪುರಾತತ್ವ ಇಲಾಖೆಯಲ್ಲೂ ದಾಖಲೆಗಳಿವೆ. ಅಯೋಧ್ಯೆ ಹಾಗೂ ಅಲ್ಲಿನ ಸುತ್ತಮುತ್ತಲಿನ ಸ್ಥಳೀಯರನ್ನು ಈ ಬಗ್ಗೆ ವಿಚಾರಿಸಿದರೂ ನೈಜ ವಿಷಯಗಳು ಹೊರಬರುತ್ತವೆ. ಆದರೆ, ಕೆಲವು ಬುದ್ಧಿಜೀವಿಗಳು ಇತಿಹಾಸ ತಿರುಚಿ, ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ. ಈ ದಾಖಲೆಗಳನ್ನೇ ನಿಜವೆಂದು ಮುಸ್ಲಿಂ ಸಮುದಾಯದ ಕೆಲವು ನಾಯಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ’ ಎಂದರು.