ವಿವಿಧ ಕಡೆಗಳಲ್ಲಿ ರಾಮಭಕ್ತರು ರಾಮನಾಮ ಸಂಕೀರ್ತನೆ, ಭಜನೆ ಮಾಡಿದರು. ಮಲ್ಲೇಶ್ವರದ ಕೋದಂಡರಾಮಪುರದ ಕೋದಂಡರಾಮ ಭಜನಾ ಮಂದಿರ, ಯಶವಂತಪುರ ವೃತ್ತದಲ್ಲಿರುವ ದಾರಿ ಆಂಜನೇಯಸ್ವಾಮಿ ದೇವಸ್ಥಾನ, ರಂಗನಾಥಪುರದಲ್ಲಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನ, ಅಶ್ವತ್ಥನಗರದಲ್ಲಿರುವ ಆಂಜನೇಯ ದೇವಸ್ಥಾನ, ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ, ಮಹಾಲಕ್ಷ್ಮಿ ಬಡಾವಣೆಯ ಆಂಜನೇಯ ದೇವಸ್ಥಾನ, ರಾಗಿಗುಡ್ಡದ ಆಂಜನೇಯ ದೇವಾಲಯ, ರಾಜಾಜಿನಗರದ ಶ್ರೀರಾಮಮಂದಿರ ಸೇರಿದಂತೆ ನಗರದ ವಿವಿಧ ಆಂಜನೇಯ ಹಾಗೂ ರಾಮಮಂದಿರಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದಲೇ ಜರುಗಿದವು.