ಚಾತುರ್ಮಾಸ್ಯ ಅಂಗವಾಗಿ ಸೋಮವಾರ ಶ್ರೀಗಳು ಪುರಪ್ರವೇಶ ಮಾಡಲಿದ್ದಾರೆ.ಈ ಬಾರಿಯ ಚಾತುರ್ಮಾಸ್ಯಕ್ಕೆ ರಾಮಾಯಣ ಚಾತುರ್ಮಾಸ್ಯ ಎಂದು ಹೆಸರಿಸಲಾಗಿದ್ದು, ಸೆ.14ರವರೆಗೆ ನಡೆಯಲಿದೆ. ಜು.16ರಂದು ಪುನರ್ವಸು ಭವನ ಲೋಕಾರ್ಪಣೆ, ಜು.19ಕ್ಕೆ ಶ್ರೀಗಳ ವರ್ಧಂತಿ, ಜು.23ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ.2ರಂದು ಗಣೇಶ ಚತುರ್ಥಿ ನಡೆಯಲಿದೆ. ಸೆ.14ರಂದು ಸೀಮೋಲ್ಲಂಘನೆ ಆಯೋಜಿಸಲಾಗಿದ್ದು, ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರತಿ ದಿನ ಶ್ರೀಗಳಿಂದ ಧಾರಾ ರಾಮಾಯಣ ಪ್ರವಚನ ಇರುತ್ತದೆ ಎಂದು ಚಾತುರ್ಮಾಸ್ಯ ಕ್ರಿಯಾಸಮಿತಿ ಅಧ್ಯಕ್ಷ ರಮೇಶ್ ಕೋರಮಂಗಲ ಮತ್ತು ಕಾರ್ಯದರ್ಶಿ ವಾದಿರಾಜ ಸಾಮಗ ತಿಳಿಸಿದ್ದಾರೆ.