ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಗೊಂಡನಹಳ್ಳಿ: ವೆಂಕಟೇಶ್ವರಸ್ವಾಮಿ ರಥೋತ್ಸವ

Last Updated 3 ಮೇ 2022, 16:21 IST
ಅಕ್ಷರ ಗಾತ್ರ

ಕೆ.ಆರ್.ಪುರ: ರಾಮಗೊಂಡನಹಳ್ಳಿ ವೆಂಕಟೇಶ್ವರಸ್ವಾಮಿ ಬ್ರಹ್ಮರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ಉತ್ಸವ ಮೂರ್ತಿಗೆ ಹೂವಿನ ಅಲಂಕಾರ ಮಾಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇರವಣಿಗೆ ಮಾಡಲಾಯಿತು. ಕಂಸಾಳೆ, ಡೊಳ್ಳುಕುಣಿತ, ತಮಟೆ, ಮಂಗಳವಾದ್ಯ ಸಹಿತ ಕಲಾ ತಂಡಗಳ ನೃತ್ಯ ಪ್ರದರ್ಶನ ನೆರೆದಿದ್ದ ಭಕ್ತರ ಆಕರ್ಷಣೆಯಾಗಿತ್ತು.

ವರ್ತೂರು, ವೈಟ್‌ಫೀಲ್ಡ್, ಸಿದ್ದಾಪುರ, ತೂಬರಹಳ್ಳಿ, ನಲ್ಲೂರಹಳ್ಳಿ, ವರ್ತೂರು ಕೊಡಿ ಸೇರಿ ಸುತ್ತಮುತ್ತಲ ಹಳ್ಳಿಗಳ ಜನ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಭಕ್ತರಿಗೆ ಅನ್ನ ದಾಸೋಹ, ಪಾನಕ, ಮಜ್ಜಿಗೆ ವಿತರಿಸಲಾಯಿತು.

ಶಾಸಕ ಅರವಿಂದ ಲಿಂಬಾವಳಿ, ಪಾಲಿಕೆ ಮಾಜಿ ಸದಸ್ಯ ಉದಯಕುಮಾರ್, ಮುಖಂಡರಾದ ವೇಣುಗೋಪಾಲ, ನಾರಾಯಣಸ್ವಾಮಿ, ರಾಜೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT