<p><strong>ಬೆಂಗಳೂರು:</strong> ‘ದ್ವೇಷದಿಂದ ಏನನ್ನೂ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಇದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುವುದೇ ಹೊರತು ಪರಿಹಾರ ಕಲ್ಪಿಸುವುದಿಲ್ಲ’ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ (ಐಐಎಂಬಿ) ಪ್ರಭಾರ ನಿರ್ದೇಶಕ ಡಾ. ಯು. ದಿನೇಶ್ ಕುಮಾರ್ ಹೇಳಿದರು.</p>.<p>ರಾಮಯ್ಯ ಇನ್ಟ್ಯೂಟ್ ಆಫ್ ಟೆಕ್ನಾಲಜಿ (ಆರ್ಐಟಿ) ಆಯೋಜಿಸಿದ್ದ 17ನೇ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಪ್ರೀತಿ ಮತ್ತು ಸಹಾನುಭೂತಿಯಿಂದ ಮಾತ್ರ ನಾವು ಮತ್ತೊಬ್ಬರನ್ನು ಗೆಲ್ಲುವುದಕ್ಕೆ ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದರು.</p>.<p>ಗೋಕುಲ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಎಂ.ಆರ್. ಸೀತಾರಾಂ ಮಾತನಾಡಿ, ‘ವಿದ್ಯಾರ್ಥಿಗಳೇ ನಮ್ಮ ವಿದ್ಯಾಸಂಸ್ಥೆಯ ನಿಜವಾದ ರಾಯಭಾರಿಗಳು. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದುಕೊಡಲಿ’ ಎಂದರು.</p>.<p>ಬಿ.ಇ, ಬಿ.ಆರ್ಕ್, ಎಂ.ಟೆಕ್, ಎಂ.ಆರ್ಕ್, ಎಂಬಿಎ ಮತ್ತು ಎಂಸಿಎ ಸೇರಿದಂತೆ ವಿವಿಧ ಕೋರ್ಸ್ಗಳ 1,278 ವಿದ್ಯಾರ್ಥಿಗಳು ಪದವಿ ಪಡೆದರು.</p>.<p>ಗೋಕುಲ ಎಜುಕೇಷನ್ ಫೌಂಡೇಷನ್ನ ಉಪಾಧ್ಯಕ್ಷ ಎಂ. ಆರ್.ಜಾನಕಿರಾಮ್, ಕಾರ್ಯದರ್ಶಿ ಎಂ.ಆರ್. ಆನಂದ ರಾಮ್, ನಿರ್ದೇಶಕರಾದ ಎಂ.ಆರ್. ಸಂಪಂಗಿ ರಾಮಯ್ಯ, ಎಂ.ಆರ್. ಕೋದಂಡ ರಾಮ್, ಆರ್ಐಟಿ ಪ್ರಾಂಶುಪಾಲ ಡಾ.ಎನ್.ವಿ.ಆರ್.ನಾಯ್ಡು, ಕಾರ್ಯಕಾರಿ ನಿರ್ದೇಶಕ ಡಾ.ಎಚ್.ವಿ.ಪಾಶ್ವನಾಥ, ಮುಖ್ಯ ಶೈಕ್ಷಣಿಕ ಸಲಹೆಗಾರ ಡಾ. ಕರಿಸಿದ್ದಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದ್ವೇಷದಿಂದ ಏನನ್ನೂ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಇದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುವುದೇ ಹೊರತು ಪರಿಹಾರ ಕಲ್ಪಿಸುವುದಿಲ್ಲ’ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ (ಐಐಎಂಬಿ) ಪ್ರಭಾರ ನಿರ್ದೇಶಕ ಡಾ. ಯು. ದಿನೇಶ್ ಕುಮಾರ್ ಹೇಳಿದರು.</p>.<p>ರಾಮಯ್ಯ ಇನ್ಟ್ಯೂಟ್ ಆಫ್ ಟೆಕ್ನಾಲಜಿ (ಆರ್ಐಟಿ) ಆಯೋಜಿಸಿದ್ದ 17ನೇ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಪ್ರೀತಿ ಮತ್ತು ಸಹಾನುಭೂತಿಯಿಂದ ಮಾತ್ರ ನಾವು ಮತ್ತೊಬ್ಬರನ್ನು ಗೆಲ್ಲುವುದಕ್ಕೆ ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದರು.</p>.<p>ಗೋಕುಲ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಎಂ.ಆರ್. ಸೀತಾರಾಂ ಮಾತನಾಡಿ, ‘ವಿದ್ಯಾರ್ಥಿಗಳೇ ನಮ್ಮ ವಿದ್ಯಾಸಂಸ್ಥೆಯ ನಿಜವಾದ ರಾಯಭಾರಿಗಳು. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದುಕೊಡಲಿ’ ಎಂದರು.</p>.<p>ಬಿ.ಇ, ಬಿ.ಆರ್ಕ್, ಎಂ.ಟೆಕ್, ಎಂ.ಆರ್ಕ್, ಎಂಬಿಎ ಮತ್ತು ಎಂಸಿಎ ಸೇರಿದಂತೆ ವಿವಿಧ ಕೋರ್ಸ್ಗಳ 1,278 ವಿದ್ಯಾರ್ಥಿಗಳು ಪದವಿ ಪಡೆದರು.</p>.<p>ಗೋಕುಲ ಎಜುಕೇಷನ್ ಫೌಂಡೇಷನ್ನ ಉಪಾಧ್ಯಕ್ಷ ಎಂ. ಆರ್.ಜಾನಕಿರಾಮ್, ಕಾರ್ಯದರ್ಶಿ ಎಂ.ಆರ್. ಆನಂದ ರಾಮ್, ನಿರ್ದೇಶಕರಾದ ಎಂ.ಆರ್. ಸಂಪಂಗಿ ರಾಮಯ್ಯ, ಎಂ.ಆರ್. ಕೋದಂಡ ರಾಮ್, ಆರ್ಐಟಿ ಪ್ರಾಂಶುಪಾಲ ಡಾ.ಎನ್.ವಿ.ಆರ್.ನಾಯ್ಡು, ಕಾರ್ಯಕಾರಿ ನಿರ್ದೇಶಕ ಡಾ.ಎಚ್.ವಿ.ಪಾಶ್ವನಾಥ, ಮುಖ್ಯ ಶೈಕ್ಷಣಿಕ ಸಲಹೆಗಾರ ಡಾ. ಕರಿಸಿದ್ದಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>