<p><strong>ಬೆಂಗಳೂರು</strong>: ಅತ್ಯಾಧುನಿಕ ಉತ್ಪನ್ನಗಳ ಅಭಿವೃದ್ಧಿ ಮತ್ತು ಸಂಶೋಧನೆಗೆ ಸಂಬಂಧಿಸಿದಂತೆ ನಾವಿನ್ಯತಾ ಕೇಂದ್ರ ಪ್ರಾರಂಭಿಸಲು ಅಮೆರಿಕದ ಡಸಾಲ್ಟ್ ಸಿಸ್ಟಮ್ಸ್ ಹಾಗೂ ಇಲ್ಲಿನ ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿವೆ. </p>.<p>‘3ಡಿ ಡಿಸೈನ್, ಎಂಜಿನಿಯರಿಂಗ್ ಹಾಗೂ ಸಿಮ್ಯುಲೇಷನ್ ತಂತ್ರಜ್ಞಾನದಲ್ಲಿ ಡಸಾಲ್ಟ್ ಸಿಸ್ಟಮ್ಸ್ ಜಾಗತಿಕ ನಾಯಕನಾಗಿ ಗುರುತಿಸಿಕೊಂಡಿದೆ. ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯವು ‘ಅಪ್ಲಿಕೇಷನ್’ ಆಧಾರಿತ ಶಿಕ್ಷಣ ಹಾಗೂ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿದೆ. ಆದ್ದರಿಂದ ಸಂಶೋಧನಾ ಕ್ಷೇತ್ರದಲ್ಲಿ ಈ ಒಡಂಬಡಿಕೆ ಮಹತ್ವದಾಗಿದೆ’ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೋಕುಲ ಎಜುಕೇಷನ್ ಫೌಂಡೇಷನ್ (ವೈದ್ಯಕೀಯ) ಅಧ್ಯಕ್ಷ ಎಂ.ಆರ್. ಜಯರಾಮ್ ತಿಳಿಸಿದ್ದಾರೆ. </p>.<p>‘ವಿಶ್ವವಿದ್ಯಾಲಯದ ಆವರಣದಲ್ಲಿ ನಾವಿನ್ಯತಾ ಕೇಂದ್ರ ಪ್ರಾರಂಭಿಸಲಾಗುತ್ತದೆ. ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಗೆ ಈ ಕೇಂದ್ರ ಸಹಕಾರಿಯಾಗಲಿದೆ. ಬೋಧಕರು, ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಉದ್ಯಮಿಗಳು ಒಟ್ಟಾಗಿ ಕಾರ್ಯನಿರ್ವಹಿಸಲಿದ್ದು, ಸಂಶೋಧನೆಗಳು ಜಗತ್ತನ್ನು ಕಾಡುತ್ತಿರುವ ಸಮಸ್ಯೆಗಳನ್ನು ಕೇಂದ್ರೀಕರಿಸಲಿದೆ’ ಎಂದಿದ್ದಾರೆ.</p>.<p>ವಿ.ವಿ ಕುಲಪತಿ ಕೆ.ಕೆ. ರೈನಾ, ‘ಉದ್ಯಮಕ್ಕೆ ಬೇಕಾದ ಕೌಶಲಗಳನ್ನು ವೃದ್ಧಿಸಲು, ಪರಿಣಾಮಕಾರಿ ಶಂಶೋಧನೆ ನಡೆಸಲು ಈ ಒಡಂಬಡಿಕೆ ಸಹಕಾರಿ’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅತ್ಯಾಧುನಿಕ ಉತ್ಪನ್ನಗಳ ಅಭಿವೃದ್ಧಿ ಮತ್ತು ಸಂಶೋಧನೆಗೆ ಸಂಬಂಧಿಸಿದಂತೆ ನಾವಿನ್ಯತಾ ಕೇಂದ್ರ ಪ್ರಾರಂಭಿಸಲು ಅಮೆರಿಕದ ಡಸಾಲ್ಟ್ ಸಿಸ್ಟಮ್ಸ್ ಹಾಗೂ ಇಲ್ಲಿನ ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿವೆ. </p>.<p>‘3ಡಿ ಡಿಸೈನ್, ಎಂಜಿನಿಯರಿಂಗ್ ಹಾಗೂ ಸಿಮ್ಯುಲೇಷನ್ ತಂತ್ರಜ್ಞಾನದಲ್ಲಿ ಡಸಾಲ್ಟ್ ಸಿಸ್ಟಮ್ಸ್ ಜಾಗತಿಕ ನಾಯಕನಾಗಿ ಗುರುತಿಸಿಕೊಂಡಿದೆ. ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯವು ‘ಅಪ್ಲಿಕೇಷನ್’ ಆಧಾರಿತ ಶಿಕ್ಷಣ ಹಾಗೂ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿದೆ. ಆದ್ದರಿಂದ ಸಂಶೋಧನಾ ಕ್ಷೇತ್ರದಲ್ಲಿ ಈ ಒಡಂಬಡಿಕೆ ಮಹತ್ವದಾಗಿದೆ’ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೋಕುಲ ಎಜುಕೇಷನ್ ಫೌಂಡೇಷನ್ (ವೈದ್ಯಕೀಯ) ಅಧ್ಯಕ್ಷ ಎಂ.ಆರ್. ಜಯರಾಮ್ ತಿಳಿಸಿದ್ದಾರೆ. </p>.<p>‘ವಿಶ್ವವಿದ್ಯಾಲಯದ ಆವರಣದಲ್ಲಿ ನಾವಿನ್ಯತಾ ಕೇಂದ್ರ ಪ್ರಾರಂಭಿಸಲಾಗುತ್ತದೆ. ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಗೆ ಈ ಕೇಂದ್ರ ಸಹಕಾರಿಯಾಗಲಿದೆ. ಬೋಧಕರು, ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಉದ್ಯಮಿಗಳು ಒಟ್ಟಾಗಿ ಕಾರ್ಯನಿರ್ವಹಿಸಲಿದ್ದು, ಸಂಶೋಧನೆಗಳು ಜಗತ್ತನ್ನು ಕಾಡುತ್ತಿರುವ ಸಮಸ್ಯೆಗಳನ್ನು ಕೇಂದ್ರೀಕರಿಸಲಿದೆ’ ಎಂದಿದ್ದಾರೆ.</p>.<p>ವಿ.ವಿ ಕುಲಪತಿ ಕೆ.ಕೆ. ರೈನಾ, ‘ಉದ್ಯಮಕ್ಕೆ ಬೇಕಾದ ಕೌಶಲಗಳನ್ನು ವೃದ್ಧಿಸಲು, ಪರಿಣಾಮಕಾರಿ ಶಂಶೋಧನೆ ನಡೆಸಲು ಈ ಒಡಂಬಡಿಕೆ ಸಹಕಾರಿ’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>