ಬೆಂಗಳೂರು: ಬನಶಂಕರಿ ಸಾಂಸ್ಕೃತಿಕ ಸಂಘದ ಸ್ವಾಗತ ಸಮಿತಿ ಸದಸ್ಯ ರಾಮಕೃಷ್ಣ ಐತಾಳ್ (86) ಅವರು ಶನಿವಾರ ಬೆಳಿಗ್ಗೆ ನಿಧನರಾದರು.
ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿಕುದುರು ಗ್ರಾಮದವರಾದ ರಾಮಕೃಷ್ಣ ಅವರು, ಇಲ್ಲಿನ ಹನುಮಂತನಗರದಲ್ಲಿ ನೆಲೆಸಿದ್ದರು. ಬನಶಂಕರಿ ಸಾಂಸ್ಕೃತಿಕ ಸಂಘದ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಸಲಹೆಗಾರರಾಗಿಯೂ ಕಾರ್ಯ ನಿರ್ವಹಿಸಿದ್ದರು.