<p><strong>ಆನೇಕಲ್:</strong> ಶಾಲೆ ಆರಂಭೋತ್ಸವ ದಿನದಂದು ತಾವು ಕಲಿತ ಶಾಲೆಗೆ ಸಚಿವ ರಾಮಲಿಂಗಾರೆಡ್ಡಿ ಹೊಸ ಕಟ್ಟಡವನ್ನು ಕೊಡುಗೆಯಾಗಿ ನೀಡಿದ್ದಾರೆ. ಹೈಟೆಕ್ ಸೌಲಭ್ಯ ಹೊಂದಿರುವ ಮೂರು ಅಂತಸ್ತಿನ ಕಟ್ಟಡವನ್ನು ಶುಕ್ರವಾರ ಸಚಿವರು, ತಮ್ಮ ಸಹಪಾಠಿಗಳು, ಕುಟುಂಬಸ್ಥರು, ಗ್ರಾಮಸ್ಥರು ಮತ್ತು ಮಕ್ಕಳು ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದರು.</p><p>ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಹಳ್ಳಿ ರಾಮಲಿಂಗಾರೆಡ್ಡಿ ಅವರ ಸ್ವಗ್ರಾಮ. ಇದೇ ಊರಿನ ಸರ್ಕಾರಿ ಶಾಲೆಯಲ್ಲಿ 1958-59ನೇ ಸಾಲಿನಲ್ಲಿ ಓದಿದ್ದರು. ಶಿಥಿಲಗೊಂಡಿದ್ದ ಹಳೆ ಶಾಲೆ ತೆರವುಗೊಳಿಸಿ, ಅಲ್ಲಿ ₹1 ಕೋಟಿ ವೆಚ್ಚದ ಆಧುನಿಕ ಸೌಲಭ್ಯವುಳ್ಳ ಶಾಲೆಯಲ್ಲಿ ನಿರ್ಮಿಸಿದ್ದಾರೆ. ಶಾಲೆ ಉದ್ಘಾಟನೆ ಮತ್ತು ಕಟ್ಟಡ ಹಸ್ತಾಂತರ ಕಾರ್ಯಕ್ರಮವನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ತಮ್ಮ ಮನೆ ಗೃಹ ಪ್ರವೇಶದಂತೆ ನಡೆಸಿಕೊಟ್ಟಿದ್ದಾರೆ.</p><p>ಶೆಟ್ಟಿಹಳ್ಳಿ ಸರ್ಕಾರಿ ಶಾಲೆ ಏಳೆಂಟು ವರ್ಷದ ಹಿಂದೆ ನಾನಾ ಕಾರಣಗಳಿಂದ ಮುಚ್ಚಿ ಹೋಗಿತ್ತು. ಯಾವುದೇ ಚಟುವಟಿಕೆ ನಡೆಯದ ಕಾರಣ ಶಿಥಿಲಗೊಂಡು ಅವಸಾನದತ್ತ ಸಾಗಿತ್ತು. ಗ್ರಾಮಸ್ಥರು ಮಕ್ಕಳನ್ನು ಬೇರೆ ಗ್ರಾಮಗಳ ಶಾಲೆಗಳಿಗೆ ಕಳುಹಿಸುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ಗ್ರಾಮಸ್ಥರು ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದರು.</p><p>‘ಬೆಂಗಳೂರಿನಲ್ಲಿ ನಿಮ್ಮ ಕ್ಷೇತ್ರದ ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡುತ್ತಿದ್ದೀರಿ?, ಹೊಸ ಶಾಲೆ ನಿರ್ಮಿಸುತ್ತಿದ್ದೀರಿ... ಆದರೆ ನೀವು ಓದಿದ ಶಾಲೆ ಮುಚ್ಚಿ ಹೋಗಿದೆ. ಶಿಥಿಲಗೊಂಡು ಪಾಳು ಬಿದ್ದಿದೆ. ಶಾಲೆಗೊಂದು ಕಾಯಕಾಲ್ಪ ನೀಡಿ’ ಎಂದು ಗ್ರಾಮಸ್ಥರು ಸಚಿವರಿಗೆ ಅರುಹಿದ್ದರು. ಇದಕ್ಕೆ ಸ್ಪಂದಿಸಿದ ರಾಮಲಿಂಗಾರೆಡ್ಡಿ, ₹1 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣದ ಭರವಸೆ ನೀಡಿದ್ದರು.</p><p>ಅದರಂತೆ ಹಳೆ ಶಾಲೆ ಜಾಗದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಹೈಟೆಕ್ ಶಾಲೆ ನಿರ್ಮಿಸಿದ್ದಾರೆ. ಸುಸಜ್ಜಿತ ಕೊಠಡಿ, ಸ್ಮಾರ್ಟ್ ಕ್ಲಾಸ್, ಆಟದ ಮೈದಾನ, ಕಂಪ್ಯೂಟರ್ ಕೊಠಡಿ, ಶೌಚಾಲಯ, ಅಡುಗೆ ಕೋಣೆ, ಪ್ರಾರ್ಥನಾ ಸಭಾಂಗಣ, ಪೀಠೋಪಕರಣ ಸೌಲಭ್ಯ ಕಲ್ಪಿಸಲಾಗಿದೆ.</p><p>ಇದೇ ವೇಳೆ ರಾಮಲಿಂಗ ರೆಡ್ಡಿ, ಪತ್ನಿ ಚಾಮುಂಡೇಶ್ವರಿ ಮತ್ತು ಪುತ್ರಿ ಸೌಮ್ಯಾ ರೆಡ್ಡಿ ಅವರು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳನ್ನು ವಿತರಿಸಿದರು.</p><p>‘ಸಾರ್ವಜನಿಕ ಆಸ್ತಿ ರಕ್ಷಣೆ ಮತ್ತು ಅಭಿವೃದ್ಧಿ ಸಾರ್ವಜನಿಕರ ಮತ್ತು ಗ್ರಾಮಸ್ಥರ ಜವಾಬ್ದಾರಿ. ಈ ನಿಟ್ಟಿನಲ್ಲಿ ಆನೇಕಲ್ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮ ನನ್ನ ಹುಟ್ಟುರಾಗಿದ್ದು, ಸರ್ಕಾರಿ ಶಾಲೆ ಶಿಥಿಲಾವಸ್ಥೆಯಲ್ಲಿತ್ತು. ಈಗ ಶಾಲೆಯ ಅಭಿವೃದ್ಧಿಗೆ ಗಮನಹರಿಸಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p><p>ಶಾಸಕ ಬಿ.ಶಿವಣ್ಣ, ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್, ಮರಸೂರು ಗ್ರಾ.ಪಂ. ಅಧ್ಯಕ್ಷ ರಮೇಶ್ ರೆಡ್ಡಿ, ಉಪಾಧ್ಯಕ್ಷ ಮಂಜುಳಾ ಸೋಮಶೇಖರ್, ಆನೇಕಲ್ ವಿಧಾನಸಭಾ ಕ್ಷೇತ್ರ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪುರುಷೋತ್ತಮರೆಡ್ಡಿ, ಗ್ರಾ.ಪಂ.ಸದಸ್ಯರಾದ ಪ್ರಭಾಕರ್ ರೆಡ್ಡಿ, ವನಿತಾ, ಮಂಜುಳಾ, ಗೌರಮ್ಮ, ಸುಧಾ, ರಶ್ಮಿ ಅನಿಲ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರಾಮಕೃಷ್ಣ ರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಕ್ಷೇತ್ರ ಶಿಕ್ಷಾಧಿಕಾರಿ ವೆಂಕಟೇಶ್ ಇದ್ದರು.</p>.ಆನೇಕಲ್: ಕಲಿತ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ ನೀಡಿದ ಸಚಿವ ರಾಮಲಿಂಗಾರೆಡ್ಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ಶಾಲೆ ಆರಂಭೋತ್ಸವ ದಿನದಂದು ತಾವು ಕಲಿತ ಶಾಲೆಗೆ ಸಚಿವ ರಾಮಲಿಂಗಾರೆಡ್ಡಿ ಹೊಸ ಕಟ್ಟಡವನ್ನು ಕೊಡುಗೆಯಾಗಿ ನೀಡಿದ್ದಾರೆ. ಹೈಟೆಕ್ ಸೌಲಭ್ಯ ಹೊಂದಿರುವ ಮೂರು ಅಂತಸ್ತಿನ ಕಟ್ಟಡವನ್ನು ಶುಕ್ರವಾರ ಸಚಿವರು, ತಮ್ಮ ಸಹಪಾಠಿಗಳು, ಕುಟುಂಬಸ್ಥರು, ಗ್ರಾಮಸ್ಥರು ಮತ್ತು ಮಕ್ಕಳು ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದರು.</p><p>ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಹಳ್ಳಿ ರಾಮಲಿಂಗಾರೆಡ್ಡಿ ಅವರ ಸ್ವಗ್ರಾಮ. ಇದೇ ಊರಿನ ಸರ್ಕಾರಿ ಶಾಲೆಯಲ್ಲಿ 1958-59ನೇ ಸಾಲಿನಲ್ಲಿ ಓದಿದ್ದರು. ಶಿಥಿಲಗೊಂಡಿದ್ದ ಹಳೆ ಶಾಲೆ ತೆರವುಗೊಳಿಸಿ, ಅಲ್ಲಿ ₹1 ಕೋಟಿ ವೆಚ್ಚದ ಆಧುನಿಕ ಸೌಲಭ್ಯವುಳ್ಳ ಶಾಲೆಯಲ್ಲಿ ನಿರ್ಮಿಸಿದ್ದಾರೆ. ಶಾಲೆ ಉದ್ಘಾಟನೆ ಮತ್ತು ಕಟ್ಟಡ ಹಸ್ತಾಂತರ ಕಾರ್ಯಕ್ರಮವನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ತಮ್ಮ ಮನೆ ಗೃಹ ಪ್ರವೇಶದಂತೆ ನಡೆಸಿಕೊಟ್ಟಿದ್ದಾರೆ.</p><p>ಶೆಟ್ಟಿಹಳ್ಳಿ ಸರ್ಕಾರಿ ಶಾಲೆ ಏಳೆಂಟು ವರ್ಷದ ಹಿಂದೆ ನಾನಾ ಕಾರಣಗಳಿಂದ ಮುಚ್ಚಿ ಹೋಗಿತ್ತು. ಯಾವುದೇ ಚಟುವಟಿಕೆ ನಡೆಯದ ಕಾರಣ ಶಿಥಿಲಗೊಂಡು ಅವಸಾನದತ್ತ ಸಾಗಿತ್ತು. ಗ್ರಾಮಸ್ಥರು ಮಕ್ಕಳನ್ನು ಬೇರೆ ಗ್ರಾಮಗಳ ಶಾಲೆಗಳಿಗೆ ಕಳುಹಿಸುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ಗ್ರಾಮಸ್ಥರು ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದರು.</p><p>‘ಬೆಂಗಳೂರಿನಲ್ಲಿ ನಿಮ್ಮ ಕ್ಷೇತ್ರದ ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡುತ್ತಿದ್ದೀರಿ?, ಹೊಸ ಶಾಲೆ ನಿರ್ಮಿಸುತ್ತಿದ್ದೀರಿ... ಆದರೆ ನೀವು ಓದಿದ ಶಾಲೆ ಮುಚ್ಚಿ ಹೋಗಿದೆ. ಶಿಥಿಲಗೊಂಡು ಪಾಳು ಬಿದ್ದಿದೆ. ಶಾಲೆಗೊಂದು ಕಾಯಕಾಲ್ಪ ನೀಡಿ’ ಎಂದು ಗ್ರಾಮಸ್ಥರು ಸಚಿವರಿಗೆ ಅರುಹಿದ್ದರು. ಇದಕ್ಕೆ ಸ್ಪಂದಿಸಿದ ರಾಮಲಿಂಗಾರೆಡ್ಡಿ, ₹1 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣದ ಭರವಸೆ ನೀಡಿದ್ದರು.</p><p>ಅದರಂತೆ ಹಳೆ ಶಾಲೆ ಜಾಗದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಹೈಟೆಕ್ ಶಾಲೆ ನಿರ್ಮಿಸಿದ್ದಾರೆ. ಸುಸಜ್ಜಿತ ಕೊಠಡಿ, ಸ್ಮಾರ್ಟ್ ಕ್ಲಾಸ್, ಆಟದ ಮೈದಾನ, ಕಂಪ್ಯೂಟರ್ ಕೊಠಡಿ, ಶೌಚಾಲಯ, ಅಡುಗೆ ಕೋಣೆ, ಪ್ರಾರ್ಥನಾ ಸಭಾಂಗಣ, ಪೀಠೋಪಕರಣ ಸೌಲಭ್ಯ ಕಲ್ಪಿಸಲಾಗಿದೆ.</p><p>ಇದೇ ವೇಳೆ ರಾಮಲಿಂಗ ರೆಡ್ಡಿ, ಪತ್ನಿ ಚಾಮುಂಡೇಶ್ವರಿ ಮತ್ತು ಪುತ್ರಿ ಸೌಮ್ಯಾ ರೆಡ್ಡಿ ಅವರು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳನ್ನು ವಿತರಿಸಿದರು.</p><p>‘ಸಾರ್ವಜನಿಕ ಆಸ್ತಿ ರಕ್ಷಣೆ ಮತ್ತು ಅಭಿವೃದ್ಧಿ ಸಾರ್ವಜನಿಕರ ಮತ್ತು ಗ್ರಾಮಸ್ಥರ ಜವಾಬ್ದಾರಿ. ಈ ನಿಟ್ಟಿನಲ್ಲಿ ಆನೇಕಲ್ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮ ನನ್ನ ಹುಟ್ಟುರಾಗಿದ್ದು, ಸರ್ಕಾರಿ ಶಾಲೆ ಶಿಥಿಲಾವಸ್ಥೆಯಲ್ಲಿತ್ತು. ಈಗ ಶಾಲೆಯ ಅಭಿವೃದ್ಧಿಗೆ ಗಮನಹರಿಸಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.</p><p>ಶಾಸಕ ಬಿ.ಶಿವಣ್ಣ, ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್, ಮರಸೂರು ಗ್ರಾ.ಪಂ. ಅಧ್ಯಕ್ಷ ರಮೇಶ್ ರೆಡ್ಡಿ, ಉಪಾಧ್ಯಕ್ಷ ಮಂಜುಳಾ ಸೋಮಶೇಖರ್, ಆನೇಕಲ್ ವಿಧಾನಸಭಾ ಕ್ಷೇತ್ರ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪುರುಷೋತ್ತಮರೆಡ್ಡಿ, ಗ್ರಾ.ಪಂ.ಸದಸ್ಯರಾದ ಪ್ರಭಾಕರ್ ರೆಡ್ಡಿ, ವನಿತಾ, ಮಂಜುಳಾ, ಗೌರಮ್ಮ, ಸುಧಾ, ರಶ್ಮಿ ಅನಿಲ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರಾಮಕೃಷ್ಣ ರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಕ್ಷೇತ್ರ ಶಿಕ್ಷಾಧಿಕಾರಿ ವೆಂಕಟೇಶ್ ಇದ್ದರು.</p>.ಆನೇಕಲ್: ಕಲಿತ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ ನೀಡಿದ ಸಚಿವ ರಾಮಲಿಂಗಾರೆಡ್ಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>