ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತದಲ್ಲಿ ಬೆಂಗಳೂರು ಹೆಡ್ ಕಾನ್‌ಸ್ಟೆಬಲ್ ಸಾವು

Last Updated 13 ಜೂನ್ 2020, 17:22 IST
ಅಕ್ಷರ ಗಾತ್ರ

ಬೆಂಗಳೂರು: ಕನಕಪುರದ ದೊಡ್ಡ ಆಲದಹಳ್ಳಿ ಬಳಿ ಶನಿವಾರ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಕೋಣನಕುಂಟೆ ಠಾಣೆ ಹೆಡ್‌ ಕಾನ್‌ಸ್ಟೆಬಲ್ ಕೆ.ಆರ್. ಕುಮಾರ್ (38) ಎಂಬುವರು ಮೃತಪಟ್ಟಿದ್ದಾರೆ.

ಕನಕಪುರದವರಾಗಿದ್ದ ಕುಮಾರ್, 2005ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು. ಅವರಿಗೆ ಪತ್ನಿ ಇದ್ದಾರೆ. ಅಪಘಾತ ಸಂಬಂಧ ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಲವು ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಕುಮಾರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅಪರಾಧ ಪ್ರಕರಣವೊಂದರ ಆರೋಪಿಗಳ ಮಾಹಿತಿ ಸಂಗ್ರಹಿಸಲೆಂದು ಬೈಕ್‌ನಲ್ಲಿ ಹೊರಟಿದ್ದಾಗಲೇ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.

‘ಯಾವುದೋ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಬೈಕ್‌ನಿಂದ ಬಿದ್ದ ಕುಮಾರ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ. ಈ ಸಂಬಂಧ ಸ್ಥಳೀಯರು ಹೇಳಿಕೆ ನೀಡಿದ್ದಾರೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT