ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧಿಸಲು ಅನಿತಾ ಸಿದ್ಧತೆ ನಡೆಸಿದ್ದರು. ಇನ್ನೊಂದೆಡೆ ರೇವಣ್ಣ ಅವರ ಪತ್ನಿ ಭವಾನಿ, ಪುತ್ರ ಪ್ರಜ್ವಲ್ ರೇವಣ್ಣ ಅವರೂ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಚುನಾವಣೆಯಲ್ಲಿ ಕುಟುಂಬದ ಇಬ್ಬರು ಮಾತ್ರ ಸ್ಪರ್ಧಿಸುತ್ತಾರೆ ಎಂದು ಹೇಳುವ ಮೂಲಕ ಕುಟುಂಬದೊಳಗಿನ ಪೈಪೋಟಿಗೆ ಕಡಿವಾಣ ಹಾಕಿದ್ದ ಎಚ್.ಡಿ.ಕುಮಾರಸ್ವಾಮಿ (ಅಂದು ಜೆಡಿಎಸ್ ಅಧ್ಯಕ್ಷ) ತಾವೇ ಎರಡು ಕಡೆ ಸ್ಪರ್ಧಿಸಿದ್ದರು.