<p><strong>ಬೆಂಗಳೂರು:</strong> ಶ್ರೀರಾಮ ಸೇವಾ ಮಂಡಳಿಯ‘81ನೇ ಶ್ರೀರಾಮನವಮಿ ಅಂತರರಾಷ್ಟ್ರೀಯ ಸಂಗೀತೋತ್ಸವ’ದ ವೇದಿಕೆ ಮತ್ತು ತಾತ್ಕಾಲಿಕ ಸಭಾಂಗಣ ನಿರ್ಮಾಣಕ್ಕೆ ಚಾಮರಾಜಪೇಟೆಯ ಹಳೆಕೋಟೆ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.</p>.<p>ಇದು ದೇಶದ ಅತಿದೊಡ್ಡ ಶಾಸ್ತ್ರೀಯ ಸಂಗೀತೋತ್ಸವಗಳಲ್ಲಿ ಒಂದಾಗಿದ್ದು, ಏಪ್ರಿಲ್ 6ರಿಂದ ಮೇ6ರವರೆಗೆ ನಡೆಯಲಿದೆ.</p>.<p>‘ಪ್ರಜಾವಾಣಿ’ ಜತೆ ಮಾತನಾಡಿದ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎಸ್.ಎನ್.ವರದರಾಜ್,‘ಸುಮಾರು 10 ಸಾವಿರ ಮಂದಿ ಕುಳಿತು ಕಾರ್ಯಕ್ರಮ ವೀಕ್ಷಿಸಬಹುದಾದ ಪೆಂಡಾಲ್ ನಿರ್ಮಾಣ ಮಾಡಲಾಗುತ್ತದೆ. ಅದಕ್ಕೆ ₹30 ಲಕ್ಷ ವೆಚ್ಚವಾಗುತ್ತದೆ. ಕಾರ್ಯಕ್ರಮಕ್ಕೆ ಅಂದಾಜು ಒಂದೂವರೆ ಕೋಟಿ ರೂಪಾಯಿ ಖರ್ಚಾಗುತ್ತದೆ’ ಎಂದು ತಿಳಿಸಿದರು.</p>.<p>‘ಕರ್ನಾಟಕ ಮತ್ತು ಹಿಂದೂಸ್ತಾನಿ ಜುಗಲ್ಬಂದಿ ಈ ಬಾರಿಯ ವಿಶೇಷ. ಗಾಯಕಎಸ್.ಪಿ.ಬಾಲಸುಬ್ರಹ್ಮಣ್ಯ ಅವರು ಮೊದಲ ಬಾರಿಗೆ ಹಿಂದೂಸ್ತಾನಿ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ಸ್ಥಳೀಯ ಗಾಯಕರು ಸಂಗೀತಸುಧೆಯನ್ನು ಉಣಬಡಿಸಲಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶ್ರೀರಾಮ ಸೇವಾ ಮಂಡಳಿಯ‘81ನೇ ಶ್ರೀರಾಮನವಮಿ ಅಂತರರಾಷ್ಟ್ರೀಯ ಸಂಗೀತೋತ್ಸವ’ದ ವೇದಿಕೆ ಮತ್ತು ತಾತ್ಕಾಲಿಕ ಸಭಾಂಗಣ ನಿರ್ಮಾಣಕ್ಕೆ ಚಾಮರಾಜಪೇಟೆಯ ಹಳೆಕೋಟೆ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.</p>.<p>ಇದು ದೇಶದ ಅತಿದೊಡ್ಡ ಶಾಸ್ತ್ರೀಯ ಸಂಗೀತೋತ್ಸವಗಳಲ್ಲಿ ಒಂದಾಗಿದ್ದು, ಏಪ್ರಿಲ್ 6ರಿಂದ ಮೇ6ರವರೆಗೆ ನಡೆಯಲಿದೆ.</p>.<p>‘ಪ್ರಜಾವಾಣಿ’ ಜತೆ ಮಾತನಾಡಿದ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎಸ್.ಎನ್.ವರದರಾಜ್,‘ಸುಮಾರು 10 ಸಾವಿರ ಮಂದಿ ಕುಳಿತು ಕಾರ್ಯಕ್ರಮ ವೀಕ್ಷಿಸಬಹುದಾದ ಪೆಂಡಾಲ್ ನಿರ್ಮಾಣ ಮಾಡಲಾಗುತ್ತದೆ. ಅದಕ್ಕೆ ₹30 ಲಕ್ಷ ವೆಚ್ಚವಾಗುತ್ತದೆ. ಕಾರ್ಯಕ್ರಮಕ್ಕೆ ಅಂದಾಜು ಒಂದೂವರೆ ಕೋಟಿ ರೂಪಾಯಿ ಖರ್ಚಾಗುತ್ತದೆ’ ಎಂದು ತಿಳಿಸಿದರು.</p>.<p>‘ಕರ್ನಾಟಕ ಮತ್ತು ಹಿಂದೂಸ್ತಾನಿ ಜುಗಲ್ಬಂದಿ ಈ ಬಾರಿಯ ವಿಶೇಷ. ಗಾಯಕಎಸ್.ಪಿ.ಬಾಲಸುಬ್ರಹ್ಮಣ್ಯ ಅವರು ಮೊದಲ ಬಾರಿಗೆ ಹಿಂದೂಸ್ತಾನಿ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ಸ್ಥಳೀಯ ಗಾಯಕರು ಸಂಗೀತಸುಧೆಯನ್ನು ಉಣಬಡಿಸಲಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>