ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ 21.80 ಲಕ್ಷ ಕಟ್ಟಡ ಕಾರ್ಮಿಕರಿದ್ದರೂ, 12.39 ಲಕ್ಷ ಕಾರ್ಮಿಕರಿಗಷ್ಟೇ ಸೌಲಭ್ಯ ಒದಗಿಸಲಾಗಿದೆ. ಉಳಿದ 9.40 ಲಕ್ಷ ಕಾರ್ಮಿಕರಿಗೆ ಸೌಲಭ್ಯ ಸಿಕ್ಕಿಲ್ಲ ಎಂದು ಸರ್ಕಾರವೇ ಹೈಕೋರ್ಟ್ಗೆ ತಿಳಿಸಿದೆ. ನೋಂದಣಿಯಾದ ಎಲ್ಲರಿಗೂ ತಲಾ ₹ 5 ಸಾವಿರ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.