‘ಸ್ಫೋಟದಲ್ಲಿ ಭಾಗಿಯಾಗಿದ್ದವರ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶದ 18 ಸ್ಥಳಗಳ ಮೇಲೆ ಇತ್ತೀಚೆಗೆ ದಾಳಿ ಮಾಡಲಾಯಿತು. ಮುಜಮೀಲ್, ಮುಸಾವೀರ್, ಅಬ್ದುಲ್ ಮಥೀನ್ ತಾಹಾ ಮನೆಗಳು ಹಾಗೂ ಅಂಗಡಿಗಳಲ್ಲಿ ಶೋಧ ನಡೆಸಲಾಯಿತು. ದಾಳಿ ಸಂದರ್ಭದಲ್ಲೇ ಮುಜಮೀಲ್ ಸಿಕ್ಕಿಬಿದ್ದ. ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ನಗದು ಜಪ್ತಿ ಮಾಡಲಾಯಿತು. ಮುಜಮೀಲ್, ಮೊಬೈಲ್ ಮಳಿಗೆ ಇಟ್ಟುಕೊಂಡಿದ್ದನೆಂಬ ಮಾಹಿತಿ ಇದೆ’ ಎಂದು ತಿಳಿಸಿವೆ.