<p><strong>ಬೊಮ್ಮನಹಳ್ಳಿ: </strong>ನಗರದ ಎಚ್ಎಸ್ಆರ್ ಬಡಾವಣೆಯ 27ನೇ ಮುಖ್ಯರಸ್ತೆಯಲ್ಲಿ ‘ರಾಮರಾಜ್ ಕಾಟನ್’ ಸಂಸ್ಥೆಯ ನೂತನ ಮಳಿಗೆ ಶುಕ್ರವಾರ ಆರಂಭವಾಯಿತು.</p>.<p>ವಿಶೇಷವಾಗಿ ಪಂಚೆಗೆ ಹೆಸರುವಾಸಿಯಾಗಿರುವ ‘ರಾಮರಾಜ್’ ದೇಶದಾದ್ಯಂತ 171 ಮಳಿಗೆಗಳನ್ನು ಹೊಂದಿದೆ. ಬೆಂಗಳೂರಿನಲ್ಲಿ ಇದೀಗ ತನ್ನ 14ನೇ ಮಳಿಗೆಯನ್ನು ತೆರೆದಿದೆ.</p>.<p>ಸಂಸ್ಥೆಯ ರಾಯಭಾರಿಯೂ ಆಗಿರುವ ನಟ ರಮೇಶ್ ಅರವಿಂದ್ ಅವರು ಮಳಿಗೆ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು,‘ರಾಮರಾಜ್ ಕಾಟನ್ನಲ್ಲಿ ವ್ಯಾಪಾರ ಎಂಬುದು ಒಂದು ಧರ್ಮ. ಲಾಭಕ್ಕಿಂತಲೂ ಹೆಚ್ಚಾಗಿ ಉದ್ಯೋಗ ಸೃಷ್ಟಿ, ಗ್ರಾಹಕರ ಹಿತ ಹಾಗೂ ಭಾರತೀಯ ಸಂಸ್ಕೃತಿ ಉಳಿಸುವ ಉದ್ದೇಶಕ್ಕೆ ಆದ್ಯತೆ ನೀಡಲಾಗಿದೆ. ಆ ಕಾರಣಕ್ಕಾಗಿ ಸಂಸ್ಥೆಯ ರಾಯಭಾರಿ ಆಗಿರುವೆ’ ಎಂದರು.</p>.<p>‘ದಕ್ಷಿಣ ಭಾರತದ ಉಡುಪು ಎಂದರೆ ಸೀರೆ, ಅಂಗಿ, ಪಂಚೆಯ ನೆನಪಾಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ಸಂಸ್ಕೃತಿ, ಆಚಾರ-ವಿಚಾರ ಹಾಗೂ ನಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳುವುದು ಸವಾಲಿನ ಕೆಲಸ. ರಾಮರಾಜ್ ಕಾಟನ್ ಇಂತಹ ಸವಾಲನ್ನು ಅವಕಾಶವಾಗಿ ಸ್ವೀಕರಿಸಿ, ಯಶಸ್ವಿಯಾಗಿರುವುದು ಹೆಮ್ಮೆಯ ವಿಚಾರ’ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ: </strong>ನಗರದ ಎಚ್ಎಸ್ಆರ್ ಬಡಾವಣೆಯ 27ನೇ ಮುಖ್ಯರಸ್ತೆಯಲ್ಲಿ ‘ರಾಮರಾಜ್ ಕಾಟನ್’ ಸಂಸ್ಥೆಯ ನೂತನ ಮಳಿಗೆ ಶುಕ್ರವಾರ ಆರಂಭವಾಯಿತು.</p>.<p>ವಿಶೇಷವಾಗಿ ಪಂಚೆಗೆ ಹೆಸರುವಾಸಿಯಾಗಿರುವ ‘ರಾಮರಾಜ್’ ದೇಶದಾದ್ಯಂತ 171 ಮಳಿಗೆಗಳನ್ನು ಹೊಂದಿದೆ. ಬೆಂಗಳೂರಿನಲ್ಲಿ ಇದೀಗ ತನ್ನ 14ನೇ ಮಳಿಗೆಯನ್ನು ತೆರೆದಿದೆ.</p>.<p>ಸಂಸ್ಥೆಯ ರಾಯಭಾರಿಯೂ ಆಗಿರುವ ನಟ ರಮೇಶ್ ಅರವಿಂದ್ ಅವರು ಮಳಿಗೆ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು,‘ರಾಮರಾಜ್ ಕಾಟನ್ನಲ್ಲಿ ವ್ಯಾಪಾರ ಎಂಬುದು ಒಂದು ಧರ್ಮ. ಲಾಭಕ್ಕಿಂತಲೂ ಹೆಚ್ಚಾಗಿ ಉದ್ಯೋಗ ಸೃಷ್ಟಿ, ಗ್ರಾಹಕರ ಹಿತ ಹಾಗೂ ಭಾರತೀಯ ಸಂಸ್ಕೃತಿ ಉಳಿಸುವ ಉದ್ದೇಶಕ್ಕೆ ಆದ್ಯತೆ ನೀಡಲಾಗಿದೆ. ಆ ಕಾರಣಕ್ಕಾಗಿ ಸಂಸ್ಥೆಯ ರಾಯಭಾರಿ ಆಗಿರುವೆ’ ಎಂದರು.</p>.<p>‘ದಕ್ಷಿಣ ಭಾರತದ ಉಡುಪು ಎಂದರೆ ಸೀರೆ, ಅಂಗಿ, ಪಂಚೆಯ ನೆನಪಾಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ಸಂಸ್ಕೃತಿ, ಆಚಾರ-ವಿಚಾರ ಹಾಗೂ ನಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳುವುದು ಸವಾಲಿನ ಕೆಲಸ. ರಾಮರಾಜ್ ಕಾಟನ್ ಇಂತಹ ಸವಾಲನ್ನು ಅವಕಾಶವಾಗಿ ಸ್ವೀಕರಿಸಿ, ಯಶಸ್ವಿಯಾಗಿರುವುದು ಹೆಮ್ಮೆಯ ವಿಚಾರ’ ಎಂದು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>