<p><strong>ಬೆಂಗಳೂರು</strong>: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಉಡುಪಿಯ ಸುಜನ್ ಮತ್ತು ಆದರ್ಶ್ ಬಂಧಿತರು. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.</p>.<p>ಪ್ರಕರಣ ದಾಖಲಾದ ಬಳಿಕ ಓಬಣ್ಣ, ಗಂಗಾಧರ್, ರಾಜೇಶ್, ಭುವನ್ಗೌಡ, ಮಂಜುನಾಥ್, ಪ್ರಮೋದ್ಗೌಡ ಹಾಗೂ ವಿಜಯಪುರದ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಎಲ್ಲ ಆರೋಪಿಗಳನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. ಆ ದೂರು ಆಧರಿಸಿ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಉಡುಪಿಯ ಸುಜನ್ ಮತ್ತು ಆದರ್ಶ್ ಬಂಧಿತರು. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.</p>.<p>ಪ್ರಕರಣ ದಾಖಲಾದ ಬಳಿಕ ಓಬಣ್ಣ, ಗಂಗಾಧರ್, ರಾಜೇಶ್, ಭುವನ್ಗೌಡ, ಮಂಜುನಾಥ್, ಪ್ರಮೋದ್ಗೌಡ ಹಾಗೂ ವಿಜಯಪುರದ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಎಲ್ಲ ಆರೋಪಿಗಳನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.</p>.<p>ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. ಆ ದೂರು ಆಧರಿಸಿ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>