ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೌನ್ಸಿಲ್ನ ರಾಜ್ಯ ಘಟಕದ ಉಪಾಧ್ಯಕ್ಷ ನೌಶಾದ್ ಆಲಂ ಕಾಸಿಮಿ, ‘ಕೇಂದ್ರ ಸರ್ಕಾರ ಉದ್ಯೋಗ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮೇಲ್ವರ್ಗದ ಆಧಾರದ ಮೇಲೆ ಮೀಸಲಾತಿ ಒದಗಿಸಿದ್ದು, ಇದು ಸಂವಿಧಾನದ ವಿರುದ್ಧವಾಗಿದೆ. ಆದ್ದರಿಂದ, ಎಲ್ಲ ಧಾರ್ಮಿಕ ಅಲ್ಪಸಂಖ್ಯಾತರಿಗೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಪ್ರತ್ಯೇಕ ಮೀಸಲಾತಿಯನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.